ಬೆಳ್ತಂಗಡಿ, ಸೆ.28 ಇಲ್ಲಿನ ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಭಾನುವಾರ ವಿಶೇಷ ಪೂಜೆಯೊಂದಿಗೆ ದಶಲಕ್ಷಣ ಪರ್ವ ಆಚರಣೆ ನಡೆಸಲಾಯಿತು.
ಉಜಿರೆಯ ಎಸ್ಡಿಎಮ್ ಕಾಲೇಜಿನ ಉಪನ್ಯಾಸಕ ಸುವೀರ್ ಜೈನ್ ಮಾತನಾಡಿ, ನಿತ್ಯ ಜೀವನದಲ್ಲಿ ದಶಧರ್ಮಗಳ ಅನುಷ್ಠಾನದ ಮಹತ್ವವನ್ನು ವಿವರಿಸಿದರು.
ಡಿ. ಶ್ರೇಯಸ್ ಕುಮಾರ್ ಉಪಸ್ಥಿತರಿದ್ದು, ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು.
ಧರ್ಮಸ್ಥಳದ ಶ್ರಾವಕ ಶ್ರಾವಕಿಯರು ಪೂಜೆಯಲ್ಲಿ ಭಾಗವಹಿಸಿ ಪುಣ್ಯ ಭಾಗಿಗಳಾದರು.