ಕುಂದಾಪುರ: ಹೊಸತು ಹಬ್ಬದ ನೆಪದಲ್ಲಿ ಕೋಳಿ ಅಂಕ ನಡೆಸಿ ಅದರಲ್ಲಿ ಜೂಜು ನಡೆಸುತ್ತಿದ್ದ ವೇಳೆ ಕುಂದಾಪುರ ಪೊಲೀಸರು ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿ 11 ಕೋಳಿಯನ್ನು ವಶಕ್ಕೆ ಪಡೆದಿದ್ದಾರೆ.
ಕುಂದಾಪುರ ತಾಲೂಕಿನ ಕಟ್ ಬೆಲ್ತೂರು ಎಂಬಲ್ಲಿ ಈ ಕೋಳಿ ಅಂಕ ನಡೆಯುತ್ತಿತ್ತು.
ಖಚಿತ ವರ್ತಮಾನದ ಮೇರೆಗೆ ಕುಂದಾಪುರ ಡಿವೈಎಸ್ಪಿ ಮಂಜುನಾಥ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಕುಂದಾಪುರ ಠಾಣಾಧಿಕಾರಿ ನಾಸೀರ್ ಹುಸೇನ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದ ವೇಳೆ ಮೂವರು ಸಿಕ್ಕಿಬಿದ್ದಿದ್ದಾರೆ. ಇನ್ನೂ ಐವತ್ತಕ್ಕೂ ಅಧಿಕ ಜನರು ಪರಾರಿಯಾಗಿದ್ದು 11 ಕೋಳಿಗಳು ಪೊಲೀಸರಿಗೆ ಸಿಕ್ಕಿದೆ. ಬಂಧಿತ ಆರೋಪಿಗಳನ್ನು ಚಂದ್ರ, ನಾಗಪ್ಪ ಹಾಗೂ ಕುಷ್ಟ ಎನ್ನಲಾಗಿದೆ.
ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.