ಕನ್ನಡ ವಾರ್ತೆಗಳು

ಖ್ಯಾತ ಬಹುಭಾಷಾ ನಟ ಅರ್ಜುನ್ ಸರ್ಜಾ ಕೊಲ್ಲೂರು ದೇವಳಕ್ಕೆ ಭೇಟಿ

Pinterest LinkedIn Tumblr

ಕುಂದಾಪುರ: ಖ್ಯಾತ ಬಹುಭಾಷಾ ನಟ, ಕನ್ನಡ ಚಿತ್ರರಂಗದಲ್ಲಿ ಬಾಲನಟನಾಗಿ ಬಂದು ಬಳಿಕ ಹಲವು ಚಿತ್ರಗಳಲ್ಲಿ ಅಭಿನಯಿಸಿ ಖ್ಯಾತಿಯಾದ ಅರ್ಜುನ್ ಸರ್ಜಾ ಗುರುವಾರ ಮಧ್ಯಾಹ್ನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿದರು.

Actor Arjun Sarja_Visit_Kollur Mookambika Temple (6) Actor Arjun Sarja_Visit_Kollur Mookambika Temple (3) Actor Arjun Sarja_Visit_Kollur Mookambika Temple (5) Actor Arjun Sarja_Visit_Kollur Mookambika Temple (1) Actor Arjun Sarja_Visit_Kollur Mookambika Temple (4) Actor Arjun Sarja_Visit_Kollur Mookambika Temple (2)

ಮಧ್ಯಾಹ್ನದ ಸುಮಾರಿಗೆ ಕುಟುಂಬ ಸಮೇತರಾಗಿ ದೇವಳಕ್ಕೆ ಆಗಮಿಸಿದ ಅವರು ಶ್ರೀ ದೇವಿ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಈ ಸಂದರ್ಭ ಪತಿ ಹಾಗೂ ಪುತ್ರಿ ಸೇರಿದಂತೆ ಕುಟುಂಬದ ಹಿರಿಯರು ಉಪಸ್ಥಿತರಿದ್ದರು. ಪೂಜೆ ನಡೆಸಿದ ಬಳಿಕ ದೇವಸ್ಥಾನದಲ್ಲಿಯೇ ಅನ್ನಪ್ರಸಾದವನ್ನು ಸ್ವೀಕರಿಸಿ ಸರ್ಜಾ ಖುಷಿಪಟ್ಟರು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕ್ರಷ್ಣಪ್ರಸಾದ ಅಡ್ಯಂತಾಯ, ಮುಖ್ಯಕಾರ್ಯನಿರ್ವಹಣಾಧಿಕಾರಿ ಟಿ.ಆರ್. ಉಮಾ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಕ್ರಷ್ಣಮೂರ್ತಿ ಮೊದಲಾದವರು ಉಪಸ್ಥಿತರಿದ್ದು ಅರ್ಜುನ್ ಸರ್ಜಾ ದಂಪತಿಗಳನ್ನು ಹಾಗೂ ಕುಟುಂಬಿಕರನ್ನು ಬರಮಾಡಿಕೊಂದು ಸ್ವಾಗತಿಸಿದರು.

Write A Comment