ಕುಂದಾಪುರ: ಖ್ಯಾತ ಬಹುಭಾಷಾ ನಟ, ಕನ್ನಡ ಚಿತ್ರರಂಗದಲ್ಲಿ ಬಾಲನಟನಾಗಿ ಬಂದು ಬಳಿಕ ಹಲವು ಚಿತ್ರಗಳಲ್ಲಿ ಅಭಿನಯಿಸಿ ಖ್ಯಾತಿಯಾದ ಅರ್ಜುನ್ ಸರ್ಜಾ ಗುರುವಾರ ಮಧ್ಯಾಹ್ನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿದರು.
ಮಧ್ಯಾಹ್ನದ ಸುಮಾರಿಗೆ ಕುಟುಂಬ ಸಮೇತರಾಗಿ ದೇವಳಕ್ಕೆ ಆಗಮಿಸಿದ ಅವರು ಶ್ರೀ ದೇವಿ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಈ ಸಂದರ್ಭ ಪತಿ ಹಾಗೂ ಪುತ್ರಿ ಸೇರಿದಂತೆ ಕುಟುಂಬದ ಹಿರಿಯರು ಉಪಸ್ಥಿತರಿದ್ದರು. ಪೂಜೆ ನಡೆಸಿದ ಬಳಿಕ ದೇವಸ್ಥಾನದಲ್ಲಿಯೇ ಅನ್ನಪ್ರಸಾದವನ್ನು ಸ್ವೀಕರಿಸಿ ಸರ್ಜಾ ಖುಷಿಪಟ್ಟರು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕ್ರಷ್ಣಪ್ರಸಾದ ಅಡ್ಯಂತಾಯ, ಮುಖ್ಯಕಾರ್ಯನಿರ್ವಹಣಾಧಿಕಾರಿ ಟಿ.ಆರ್. ಉಮಾ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಕ್ರಷ್ಣಮೂರ್ತಿ ಮೊದಲಾದವರು ಉಪಸ್ಥಿತರಿದ್ದು ಅರ್ಜುನ್ ಸರ್ಜಾ ದಂಪತಿಗಳನ್ನು ಹಾಗೂ ಕುಟುಂಬಿಕರನ್ನು ಬರಮಾಡಿಕೊಂದು ಸ್ವಾಗತಿಸಿದರು.