ಕನ್ನಡ ವಾರ್ತೆಗಳು

ಕೊಲ್ಲೂರು ದೇವಸ್ಥಾನದ ವತಿಯಿಂದ ರೆಡ್ ಕ್ರಾಸ್ ಸಂಸ್ಥೆಗೆ ಆಂಬುಲೆನ್ಸ್ ಕೊಡುಗೆ

Pinterest LinkedIn Tumblr

ಕುಂದಾಪುರ: ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಶಾಖೆ ಇವರ ಹೊರಾಂಗಣ ರಕ್ತದಾನ ಶಿಭಿರಕ್ಕೆ ಅವಶ್ಯವಿರುವ ರೂ. 11,12,383.00 ವೆಚ್ಛದ (Two Stretcher TATA Ambulance) ಆಂಬುಲೆನ್ಸ್ ಅನ್ನು ಶ್ರೀ ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಶ್ರೀ ಕೃಷ್ಣಪ್ರಸಾದ್ ಅಡ್ಯಂತಾಯ ಹಾಗೂ ಕಾರ್ಯನಿರ್ವಹಣಾಧಿಕಾರಿ ಟಿ.ಆರ್. ಉಮ ಇವರು ಹಸ್ತಾಂತರಿಸಿದರು.

Kollur_Redcross_Ambulense (1) Kollur_Redcross_Ambulense (2)

ಈ ಸಂದರ್ಭದಲ್ಲಿ ಶ್ರೀ ದೇವಳದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಹೆಚ್. ಕೃಷ್ಣ ಮೂರ್ತಿ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಜಯಾನಂದ ಹೋಬಳಿದಾರ್, ಎಸ್. ಜಯಕರ ಶೆಟ್ಟಿ ಚಯರ್ ಮ್ಯಾನ್ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಶಾಖೆ, ವೈ ಸೀತಾರಾಮ ಶೆಟ್ಟಿ ಕಾರ್ಯದರ್ಶಿ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಶಾಖೆ, ಶಿವರಾಮ ಶೆಟ್ಟಿ ಕೋಷಾಧಿಕಾರಿ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಶಾಖೆ, ಆವರ್ಸೆ ಮುತ್ತಯ್ಯ ಶೆಟ್ಟಿ ಸಂಚಾಲಕರು ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಶಾಖೆ, ಉಪಸ್ಥಿತರಿದ್ದರು.

ಕೆ. ನರಸಿಂಹ ಭಟ್ ಇವರು ವಾಹನದ ಪೂಜೆಯನ್ನು ನೆರವೇರಿಸಿದರು.

Write A Comment