ವರದಿ / ಚಿತ್ರ : ಸತೀಶ್ ಕಾಪಿಕಾಡ್
ಮಂಗಳೂರು : ಮಂಗಳೂರಿನ ಪ್ರತಿಷ್ಠಿತ ಕರಾವಳಿ ಕಾಲೇಜು ಸಮೂಹದ ವತಿಯಿಂದ ನಗರದ ಕೊಟ್ಟಾರದ ಕಾಲೇಜು ಆವರಣದಲ್ಲಿ ಸೋಮವಾರ ದೀಪಾವಳಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿ.ಆರ್ ಎ.ಜ್ಯುಕೇಶನ್ ಹಾಗೂ ಕರಾವಳಿ ಸಮೂಹ ಸಂಸ್ಥೆಗಳ ಸ್ಥಾಪಕಾಧ್ಯಕ್ಷ ಎಸ್.ಗಣೇಶ್ ರಾವ್ ಕಾಲೇಜಿನಲ್ಲಿ ಎಲ್ಲಾ ಜಾತಿ ಧರ್ಮದ ವಿದ್ಯಾರ್ಥಿಗಳು ದೀಪಾವಳಿ ಹಬ್ಬವನ್ನು ಒಟ್ಟಿಗೆ ಆಚರಿಸುತ್ತಿರುವುದು ಹೆಮ್ಮೆಯೆ ವಿಷಯ.
ಬೇರೆ ಬೇರೆ ಊರುಗಳಿಂದ ಬಂದಂತಹ ವಿವಿಧ ಜಾತಿ, ಧರ್ಮಗಳ ವಿದ್ಯಾರ್ಥಿಗಳಿಗೆ ಇಂಥಹ ಒಂದು ಹಬ್ಬವನ್ನು ಆಚರಿಸಲು ಕಾಲೇಜು ಆವಕಾಶ ಮಾಡಿಕೊಟ್ಟಿದ್ದು, ವಿದ್ಯಾರ್ಥಿಗಳೆಲ್ಲರೂ ಸಂಭ್ರಮದಿಂದ ಪಾಲ್ಗೊಂಡು ಸಾಮರಸ್ಯದಿಂದ ಹಬ್ಬವನ್ನು ಆಚರಿಸುತ್ತಿದ್ದಾರೆ. ಇಲ್ಲಿ ದೀಪಾವಳಿ ಮಾತ್ರವಲ್ಲದೇ ಓಣಂ ಸಹಿತಾ ವಿವಿಧ ಧರ್ಮಗಳ ಹಬ್ಬವನ್ನು ಎಲ್ಲಾ ವಿದ್ಯಾರ್ಥಿಗಳು ಒಟ್ಟಿಗೆ ಆಚರಿಸುತ್ತಾರೆ.
ವಿದ್ಯಾರ್ಥಿಗಳಲ್ಲಿ ಯಾವೂದೇ ಜಾತಿ ಧರ್ಮದ ಬಗ್ಗೆ ದ್ವೇಷ ಬಾವನೆ ಬರಬಾರದೆಂಬ ಸದುದ್ದೇಶದಿಂದ ಇಂತಹ ಹಬ್ಬವನ್ನು ಒಟ್ಟಿಗೆ ಆಚರಿಸಲು ಅವಕಾಶ ನೀಡಲಾಗುತ್ತದೆ. ವಿದ್ಯಾರ್ಥಿಗಳು ಅಷ್ಟೇ, ಈ ರೀತಿಯ ಹಬ್ಬಗಳಲ್ಲಿ ಪಾಲ್ಗೊಂಡು ಇದರ ಪ್ರಯೋಜನ ಪಡೆದುಕೊಂಡು ತಮ್ಮ ಭವಿಷ್ಯವನ್ನು ಉಜ್ವಲವಾಗಿ ಬೆಳಗಿಸುವಂತಹ ಸಾಧನೆ ಮಾಡಬೇಕು ಎಂದು ಕರೆ ನೀಡಿದರು.
ಕಾಲೇಜು ಆಡಳಿತಾ ಮಂಡಳಿಯ ನಿರ್ದೇಶಕಿ ಶ್ರೀಮತಿ ಲತಾ.ಜಿ.ರಾವ್. ಪ್ರಾಂಶುಪಾಲ ಮೋಹನ್ ವಿವಿಧ ವಿಭಾಗಳ ಪ್ರಾಂಶುಪಾಲರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತ್ತು. ಬಳಿಕ ವಿದ್ಯಾರ್ಥಿಗಳೆಲ್ಲರೂ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಸತೀಶ್ ಕಾಪಿಕಾಡ್ : 9035089084