ಕನ್ನಡ ವಾರ್ತೆಗಳು

ಮುಂದುವರಿದ ಟಿಪ್ಪು ದಿನಾಚರಣೆ ವಿವಾದದ ಕಿಡಿ : ಉಳ್ಳಾಲದಲ್ಲಿ ಕಿಡಿಗೇಡಿಗಳಿಂದ ಬಸ್ಸಿಗೆ ಕಲ್ಲೆಸೆದು ಹಾನಿ

Pinterest LinkedIn Tumblr

Ullala_bus_damage_1

ಮಂಗಳೂರು: ಟಿಪ್ಪು ದಿನಾಚರಣೆ ವಿವಾದದ ಕಿಡಿಯಿಂದ ಕಳೆದ ನಾಲ್ಕು ದಿನಗಳಿಂದ ಜಿಲ್ಲೆಯಾದ್ಯಂತ ನಡೆಯುತ್ತಿದ್ದ ಅಹಿತಕರ ಘಟನೆಗಳು ನಿಧಾನವಾಗಿ ಕಡಿಮೆಯಾಗುತ್ತಿದ್ದಂತೆ ಉಳ್ಳಾಲ -ತೊಕ್ಕೊಟ್ಟು ಸಮೀಪ ಕಿಡಿಗೇಡಿಗಳು ಬಸ್ಸಿಗೆ ಕಲ್ಲು ತೂರಾಟ ನಡೆಸಿದ ಘಟನೆ ರವಿವಾರ ಮಧ್ಯಾಹ್ನ ನಡೆದಿದೆ.

ನಗರದ ಹೊರವಲಯದ ಉಳ್ಳಾಲದಲ್ಲಿ ಈ ಕಲ್ಲು ತೂರಾಟ ಪ್ರಕರಣ ನಡೆದಿದ್ದು ಪರಿಸರದಲ್ಲಿ ಮತ್ತೆ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

Ullala_bus_damage_2

ಉಳ್ಳಾಲದ ಮೊಗವೀರ ಪಟ್ನದಲ್ಲಿ ಕಲ್ಲು ತೂರಾಟ ನಡೆದಿದ್ದು, ಖಾಸಗಿ ಬಸ್ಸಿನ ಗಾಜು ಪುಡಿಯಾಗಿದೆ. ಇತ್ತೀಚೆಗೆ ಕೆಲವು ದಿನಗಳಿಂದ ಇಂತಹ ಅಹಿತಕರ ಘಟನೆಗಳು ಈ ಪ್ರದೇಶದಲ್ಲಿ ನಡೆಯುತ್ತಿದ್ದು, ಸ್ಥಳದಲ್ಲಿ ಇದೀಗ ಬೂದಿಮುಚ್ಚಿದ ಕೆಂಡದಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಪ್ರದೇಶವು ಕೋಮು ಸೂಕ್ಷ್ಮ ಪ್ರದೇಶವಾಗಿದ್ದು ಪೊಲೀಸರು ಘಟನಾ ಸ್ಥಳದಲ್ಲಿ ಸೂಕ್ತ ಭದ್ರತೆ ಕೈಗೊಂಡಿದ್ದಾರೆ. ಇದೀಗ ಉಳ್ಳಾಲ ಹಾಗೂ ತೊಕ್ಕೊಟ್ಟು ಪರಿಸರದಲ್ಲಿ (ರ್‍ಯಾಪಿಡ್ ಫೋರ್ಸ್ ) ಕ್ಷಿಪ್ರ ಕಾರ್ಯಾಚರಣೆ ಪಡೆ ಕಾರ್ಯಾಚರಣೆ ಆರಂಭಿಸಿದೆ.

Write A Comment