ಮಂಗಳೂರು : ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇದೇ ಬರುವ ನವೆಂಬರ್ 19 ಮತ್ತು 20ರಂದು ನಡೆಯಲಿರುವ ಉದ್ಯೋಗ ಮೇಳಕ್ಕೆ ಪೂರ್ವಭಾವಿಯಾಗಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಭಾನುವಾರ ಕಾಲೇಜಿನಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಅಂತಿಮ ಹಂತದ ಸಮಾಲೋಚನಾ ಸಭೆ ನಡೆಸಿದರು.
ದ.ಕ ಜಿಲ್ಲಾಧಿಕಾರಿ ಇಬ್ರಾಹಿಂ, ಉದ್ಯೋಗ ಮೇಳದ ಸಮನ್ವಯಕಾರ ಎಂ.ವಿವೇಕ ಆಳ್ವ, ಕಾಲೇಜಿನ ಪ್ರಾಂಶುಪಾಲ ಡಾ.ಗಣೇಶ್ ಭಟ್ ಮತ್ತಿತರರು ಉಪಸ್ಥಿತರಿದ್ದರು.