ಮಂಗಳೂರು: ವ್ಯಾಪರಿಗಳನ್ನು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮೀಷನರ್ ಎಸ್ ಮುರುಗನ್ ತಿಳಿಸಿದ್ದಾರೆ.
ಮಂಗಳೂರು ಪೊಲೀಸ್ ಕಮೀಷನರ್ ಕಚೇರಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ನಗರದ ಬಜಾಲ್ ಕ್ರಾಸ್ ಬಳಿ ಸ್ಕಾರ್ಪಿಯೋ ಕಾರಿನಲ್ಲಿ ತೆರಳುತ್ತಿದ್ದ ರಾಜಸ್ಥಾನ ಮೂಲದ ಭುರರಾಮ್ ಎಂಬವರನ್ನು ಕಾರಿನಲ್ಲಿ ಬಂದ ನಾಲ್ವರು ಪಿಸ್ತೂಲ್ ತೋರಿಸಿ 1.30ಲಕ್ಷ ನಗದು ಹಾಗೂ 1.44 ಲಕ್ಷ ಮೌಲ್ಯದ ಚಿನ್ನಾಭರಣವನ್ನು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣದ ಆರೋಪಿ ಸ್ಕಾರ್ಪಿಯೋ ಕಾರು ಚಾಲಕ ಬವರ್ ಲಾಲ್ , ಕಿಶೋರ್ಕುಮಾರ್(21), ಸಗನ್ ಲಾಲ್(30)ರನ್ನು ಮಂಗಳೂರು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ ಎಂದು ಅವರು ಹೇಳಿದರು.
ಆರೋಪಿಗಳಿಂದ ಆಟಿಕೆ ಪಿಸ್ತೂಲ್, ಚೂರಿ, ಎಂಟು ಮೊಬೈಲ್, 95 ಸಾವಿರ ನಗದು ಹಾಗೂ ಸ್ಕಾರ್ಪಿಯೋ ಕಾರು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.