ಕುಂದಾಪುರ: ಸೈಕಲ್ನಲ್ಲಿ ಸಾಗುತ್ತಿದ್ದ ಶಾಲಾ ಬಾಲಕನಿಗೆ ಸ್ವಿಪ್ಟ್ ಕಾರು ಢಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ಸಮೀಪದ ನಾಗೂರಿನಲ್ಲಿ ಸಂಭವಿಸಿದೆ. ನಾಗೇಶ (೧೬) ಮೃತಗೊಂಡಿರುವ ವಿದ್ಯಾರ್ಥಿ. ಈತ ಕಿರಿಮಂಜೇಶ್ವರ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ.
ಶಾಲೆಯಿಂದ ಮನೆಗೆ ಬರುವ ವೇಳೆ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ ಬೈಂದೂರು ವೃತ್ತ ನಿರೀಕ್ಷಕ ಸುದರ್ಶನ ಹಾಗೂ ಎಸ್ಸೈ ಸಂತೋಷ ಕಾಯ್ಕಿಣಿ ಭೇಟಿ ನೀಡಿ ಕಾರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೈಂದೂರಿನಲ್ಲಿ ಕಳೆದ ಮೂರು ದಿನಗಳಲ್ಲಿ ನಡೆದ ಕೆಲವು ಅಪಘಾತಗಳಲ್ಲಿ ಇದು ನಾಲ್ಕನೆಯ ಸಾವು.