ಮ೦ಗಳೂರು, ನ.27: ನ.17 ರಂದು ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಆಟೋರಿಕ್ಷಾ ಪ್ರಯಾಣ ದರ ಪರಿಷ್ಕರಣೆ ಬಗ್ಗೆ ಚರ್ಚಿಸಲಾಗಿ ಸಭೆ ನಡೆದ ಒಂದು ವಾರದೊಳಗೆ ಪರಿಶೀಲಿಸಿ ಆಟೋರಿಕ್ಷಾ ದರ ಪರಿಷ್ಕರಣೆ ಕುರಿತು ತೀರ್ಮಾನ ಕೈಗೊಳ್ಳಲಾಗುವುದೆಂದು ನಿರ್ಧರಿಸಲಾಗಿತ್ತು, ಆದರೆ ಚುನಾವಣಾ ಆಯೋಗವು ರಾಜ್ಯದಲ್ಲಿ ೨೫ ವಿಧಾನ ಪರಿಷತ್ತಿನ ಸದಸ್ಯರ ಆಯ್ಕೆಗೆ ಚುನಾವಣೆ ಘೋಷಿಸಿದ್ದು ಹಾಗೂ ತಕ್ಷಣದಿಂದಾಗಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದಾಗಿ ಆದೇಶಿಸಿರುತ್ತದೆ.
ಈ ಹಿನ್ನೆಲೆಯಲ್ಲಿ ಸದರಿ ಚುನಾವಣೆ ಮತ್ತು ನೀತಿ ಸಂಹಿತೆ ಮುಕ್ತಾಯವಾದ ನಂತರ ಅಟೋರಿಕ್ಷಾ ಪ್ರಯಾನದರ ಪರಿಷ್ಕರಣೆ ಸಂಬಂಧ ನಿರ್ಧಾರ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ