ಬಂಟ್ವಾಳ,ನ.30: ಬಂಟ್ವಾಳ-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಕಾವಳಪಡೂರು ರಸ್ತೆ ಮಧ್ವದಲ್ಲಿ ಕಾರು ಮತ್ತು ಬೈಕ್ ನಡುವೆ ನಡೆದ ಅಪಾಘಾತ ಬೈಕ್ ಸವಾರ ತನ್ನ ಕೈಯನ್ನೇ ಕಳೆದುಕೊಂಡು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಗಾಯಗೊಂಡ ವ್ಯಕ್ತಿಯನ್ನು ಮಂಗಳೂರು ಶಕ್ತಿನಗರ ನಿವಾಸಿ ಕ್ಯಾನ್ವಿಲ್ ಎಂದು ಗುರುತಿಸಲಾಗಿದೆ . ಕಾರು ಬೆಳ್ತಂಗಡಿಯಿಂದ ಮಂಗಳೂರು ಕಡೆಯಿಂದ ಬರುತ್ತಿದ್ದು, ಎದುರುಗಡೆಯಿಂದ ಬರುತ್ತಿದ್ದ ಬೈಕ್ ಗೆ ಢಿಕ್ಕಿಯಾಗಿದೆ. ಅಪಘಾತದಲ್ಲಿ ಕ್ಯಾನ್ವಿಲ್ ಅವರ
ಬಲಗೈ ತುಂಡಾಗಿದ್ದು, ಕಾಲಿಗೆ ಗಂಭೀರ ಗಾಯವಾಗಿತ್ತು.
ಘಟನೆಯ ತೀವ್ರತೆಗೆ ಕಾರು ಚಾಲಕನಿಗೂ ಗಾಯಗಳಾಗಿದ್ದು ಇಬ್ಬರನ್ನೂ ತುಂಬೆ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದ್ದು ಬಳಿಕ ಕ್ಯಾನ್ವಿಲ್ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಬಂಟ್ವಾಳ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.