ಮಂಗಳೂರು,ನ.30 :ಬಂಟ್ವಾಳದ ಸಮೀಯುಲ್ಲಾನ ಮೇಲೆ ನಡೆದ ಮಾರಾಣಾಂತಿಕ ಹಲ್ಲೆ ಮತ್ತು ಹರೀಶ್ ಕೊಲೆ ಪ್ರಕರಣಕ್ಕೆ ಸಂಬಂದಿಸಿದ ಪ್ರಮುಖ ಆರೋಪಿಯನ್ನು ಪುತ್ತೂರಿನ ಬಸ್ ನಿಲ್ದಾಣದ ಬಳಿಯಿಂದ ಸೋಮವಾರ ಬಂಧಿಸಲಾಗಿದೆ ಎಂದು ಎಸ್ಪಿ ಶರಣಪ್ಪ ಹೇಳಿದ್ದಾರೆ.
ನಗರದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಕರಣದ ಪ್ರಮುಖ ಆರೋಪಿಯಾಗಿರುವ ಗೋಳ್ತಮಜಲು ನಿವಾಸಿ ನಾರಾಯಣ ಪೂಜಾರಿ ಎಂಬವರ ಪುತ್ರ ಮಿಥುನ್(27) ನನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದರು.
ಹರೀಶ್ ಹತ್ಯೆಯ ಪ್ರಮುಖ ಆರೋಪಿ ಮಿಥುನ್ ರೌಡಿ ಶೀಟರ್ ಆಗಿದ್ದು, ಈಗಾಗಲೇ ಈತನ ಮೇಲೆ 1 ಕೊಲೆ ಪ್ರಕರಣ, 3 ಕೊಲೆಯತ್ನ ಪ್ರಕರಣ ,ಇತರ 8 ಪ್ರಕರಣಗಳು ಹಾಗೂ ವಿಟ್ಲ ಠಾಣೆಯಲ್ಲೂ 1 ಪ್ರಕರಣ ದಾಖಲಾಗಿದ್ದು, ಕೃತ್ಯಕ್ಕೆ ಬಳಸಿಫ಼ ಮಾರುತಿ ಓಮ್ನಿ ಕಾರನ್ನು ಇನ್ನಷ್ಟೆ ವಶಪಡಿಸಬೇಕಾಗಿದೆ,ಅಲ್ಲದೇ ಪ್ರಕರಣದ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಪತ್ತೆಗಾಗಿ ಬಲೆ ಬೀಸಲಾಗಿದ್ದು, ಶೀಘ್ರವೇ ಬಂಧಿಸಲಾಗುವುದು ಎಂದು ಎಸ್ಪಿ ಶರಣಪ್ಪ ಮಾಹಿತಿ ನೀಡಿದರು.
ಹರೀಶ್ ಹತ್ಯೆ ಸಂಬಂಧ ಅಪರಿಚಿತ ದುಷ್ಕರ್ಮಿಗಳ ತಂಡವನ್ನು ಪತ್ತೆ ಹಚ್ಚಲು ವಿಶೇಷ ಪೊಲೀಸ್ ತಂಡವು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ್ದು, ಇಂದು ಬೆಳಗ್ಗೆ 6:30ರ ವೇಳೆಗೆ ಪುತ್ತೂರಿನಲ್ಲಿ ಬಂಧಿಸಲಾಗಿದೆ ಎಂದು ಅವರು ತಿಳಿಸಿದರು.