ಬಂಟ್ವಾಳ, ಡಿ ,12: ಅಮ್ಚೂರು ಚರ್ಚ್ ಬಳಿ ಇರುವ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ನಗದು ದೋಚಿದ ಕಳ್ಳರು ಪರಾರಿಯಾದ ಘಟನೆ ದಕ್ಚಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಶನಿವಾರ ನಡೆದಿದೆ.
ಅಮ್ಚೂರಿನ ಇಲ್ಯಾಸ್ ಡಿಸೋಜಾ ಎಂಬುವರ ಮನೆಗೆ ನುಗ್ಗಿದ್ದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ದೋಚಿ ಪರಾರಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಠಾಣಾ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು, ಶ್ವಾನ ದಳ , ಬೆರಳಚ್ಚು ತಜ್ಞರು ಆಗಮಿಸಿ ತನಿಖೆ ಮುಂದುವರಿಸಿದ್ದಾರೆ