ಮಂಗಳೂರು, ಡಿ,12: ಬಿಜೈ ರಾಜಾ ಕೊಲೆ ಸೇರಿದಂತೆ ಕೊಲೆಯತ್ನ, ಡಕಾಯಿತಿ ಸೇರಿ 8 ಕ್ಕಿಂತಲೂ ಹೆಚ್ಚಿನ ಪ್ರಕರಣಗಳಲ್ಲಿ ಭಾಗಿಯಾಗಿದ್ದ 2 ರೌಡಿ ಶೀಟರ್ ಗಳ ವಿರುದ್ಧ ಗೂಂಡಾ ಕಾಯ್ದೆ ದಾಖಲಿಸುವಂತೆ ಕಮಿಷನರ್ ಎಸ್. ಮುರುಗನ್ ಆದೇಶಿಸಿದ್ದಾರೆ.
ಈಗಾಗಲೇ ಹಲವು ಕೃತ್ಯಗಳಲ್ಲಿ ಭಾಗಿಯಾಗಿದ್ದ ಬೊಕ್ಕಪಟ್ಣ ನಿವಾಸಿ ಭರತೇಶ್, ಕೊಟ್ಟಾರ ನಿವಾಸಿ ಚಂದ್ರಹಾಸ್ ಶೆಟ್ಟಿ ಎಂಬುವರ ಮೇಲೆ ಗೂಂಡಾ ಕಾಯ್ದೆ ದಾಖಲಿಸುವಂತೆ ಕಮಿಷನರ್ ಆದೇಶಿಸಿದ್ದಾರೆ.
2 ದಿನಗಳ ಹಿಂದೆ ರೌಡಿ ಶೀಟರ್ ಸಫ್ವಾನ್ ಮೇಲೆ ಗೂಂಡಾ ಕಾಯ್ದೆ ದಾಖಲಿಸಿದ್ದು , ವಿವಿಧ ಅಪರಾಧಗಳಲ್ಲಿ ಭಾಗಿಯಾಗಿದ್ದ ಮೂವರ ಮೇಲೆ ಗೂಂಡಾ ಕಾಯ್ದೆ ಜಾರಿ ಮಾಡಲಾಗಿದೆ.