ಕನ್ನಡ ವಾರ್ತೆಗಳು

ದಲಿತ ವಿದ್ಯಾರ್ಥಿ ರೋಹಿತ್ ವೇಮುಲರ ಸಾಂಸ್ಥಿಕ ಹತ್ಯೆ ಖಂಡಿಸಿ ಮಂಗಳೂರು ವಿವಿಯಲ್ಲಿ ಪ್ರತಿಭಟನೆ

Pinterest LinkedIn Tumblr

Rohith_VV_Protest_1

ಮಂಗಳೂರು : ಹೈದರಾಬಾದ್ ಕೇಂದ್ರಿಯ ವಿಶ್ವವಿದ್ಯಾನಿಲಯದ ದಲಿತ ವಿದ್ಯಾರ್ಥಿ ರೋಹಿತ್ ವೇಮುಲರ ಸಾಂಸ್ಥಿಕ ಹತ್ಯೆ ಖಂಡಿಸಿ ಹಾಗೂ ಪ್ರಕರಣದ ಉನ್ನತಮಟ್ಟದ ತನಿಖೆಗೆ ಆಗ್ರಹಿಸಿ ರಾಜ್ಯವ್ಯಾಪಿ ನಡೆದ ವಿಶ್ವವಿದ್ಯಾಲಯ ಬಂದ್ ಹಿನ್ನೆಲೆಯಲ್ಲಿ ಕೊಣಾಜೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಮುಖ್ಯದ್ವಾರದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.

Rohith_VV_Protest_2 Rohith_VV_Protest_3 Rohith_VV_Protest_4 Rohith_VV_Protest_5

ಮತೀಯವಾದ ಅಳಿಯಲಿ, ಕ್ಯಾಂಪಸ್ ಡೆಮಾಕ್ರಸಿ ಉಳಿಯಲಿ ಎಂಬ ಧ್ಯೇಯ ವಾಕ್ಯದೊಂದಿಗೆ ಆರಂಭವಾದ ಈ ಪ್ರತಿಭಟನೆಯಲ್ಲಿ ದಲಿತ ವಿದ್ಯಾರ್ಥಿ ರೋಹಿತ್ ವೇಮುಲ ಅಸಹಜ ಸಾವಿನ ಕುರಿತು ಉನ್ನತಮಟ್ಟದ ತನಿಖೆ ಹಾಗೂ ಹತ್ಯೆಗೆ ಕಾರಣರಾದವರನ್ನು ಬಂಧಿಸಲು ಒತ್ತಾಯಿಸಲಾಯಿತು.ಜಿಲ್ಲೆಯ ಎಲ್ಲಾ ಪ್ರಗತಿ ಪರ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವು.

Rohith_VV_Protest_6 Rohith_VV_Protest_7 Rohith_VV_Protest_8

ಸಂಶೋಧನಾ ವಿದ್ಯಾರ್ಥಿ ಹರೀಶ್, ಎಸ್ ಎಫ್ ಐ ಜಿಲ್ಲಾ ಕಾರ್ಯದರ್ಶಿ ಚರಣ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಹಂಝ ಕಿನ್ಯಾ, ಬಿವಿಎಸ್ ಮುಖಂಡ ಸುರೇಶ್ ಪಿ.ಬಿ., ಸಾತ್ವಿಕ್ ಪಿ.ಜಿ. ಎಸ್ ಎಫ್ ಐ ಜಿಲ್ಲಾ ಸಂಘಟಕಿ ಮಾಧುರಿ ಬೋಳಾರ, ಸಂಶೋಧನಾ ವಿದ್ಯಾರ್ಥಿ ರಘು ಮೊದಲಾದವರು ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದರು.

Write A Comment