ಕನ್ನಡ ವಾರ್ತೆಗಳು

ಎಡಪದವಿನಲ್ಲಿ ಭೀಕರ ಅಪಘಾತ : ಮೂವರು (ನಾಲ್ವರು) ಬಲಿ – ಹಲವರಿಗೆ ಗಂಭೀರ ಗಾಯ

Pinterest LinkedIn Tumblr

Yedapadavu_axident_1

ಬಜ್ಪೆ, ಮಾ.8 : ಈಚರ್ ಲಾರಿ ಹಾಗೂ ಟಿಪ್ಪರ್ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಗಂಭೀರ ಗಾಯಗೊಂಡ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಎಡಪದವಿನಲ್ಲಿ ಇಂದು ಬೆಳಿಗ್ಗೆ 11ರ ಸುಮಾರಿಗೆ ಸಂಭವಿಸಿದ.

ಮೃತ ದುರ್ದೈವಿಗಳನ್ನು ಹುಬ್ಬಳ್ಳಿ ನಿವಾಸಿ ಕಾಳಪ್ಪ (37), ಜಾರ್ಖಂಡ್ ನಿವಾಸಿ ಸೋನು (35) ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ ನಿವಾಸಿ ಪ್ರಕಾಶ್ ರಾವ್ (34) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಸಲಾಗಿದೆ.

Yedapadavu_axident_2 Yedapadavu_axident_3 Yedapadavu_axident_4 Yedapadavu_axident_5 Yedapadavu_axident_6

ಮೂಡಬಿದ್ರೆಯಿಂದ ಬರುತ್ತಿದ್ದ ಈಚರ್ ಲಾರಿ ಎಡಪದವು ಭಜನಾ ಮಂದಿರ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದು, ಈ ಸಂದರ್ಭ ಈಚರ್ ಲಾರಿಯಲ್ಲಿದ್ದ ನಾಲ್ವರ ಪೈಕಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದ ರಾಜೇಶ್ ಎಂಬವರು ಕೂಡ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.(ಈ ಬಗ್ಗೆ ಖಚಿತ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ). ಅಪಘಾತದಲ್ಲಿ ಬೈಕ್ ಸವಾರನೊಬ್ಬನಿಗೆ ಕೂಡ ಗಂಭೀರ ಗಾಯವಾಗಿರುವ ಬಗ್ಗೆ ವರದಿಯಾಗಿದೆ.

ಮೃತದೇಹವನ್ನು ನಗರದ ವೆನ್ಲಾಕ್‌ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಬಜ್ಪೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Write A Comment