ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಠಾನದ ಚಿನ್ನಾಭರಣ ಕಳವು ಪ್ರಕರಣದ ಪ್ರಮುಖ ಆರೋಪಿ ಶಿವರಾಮ ಮಡಿವಾಳನನ್ನು ನ್ಯಾಯಾಲಯ ಮತ್ತೆ ನಾಲ್ಕು ದಿನಗಳ ಪೋಲಿಸ್ ಕಸ್ಟಡಿಗೆ ನೀಡಿದೆ.
ಇತರ ಆರೋಪಿಗಳಾದ ಗಂಗಾಧರ ಹೆಗ್ಡೆ, ಪ್ರಸಾದ್ ಆಚಾರ್ಯ, ನಾಗರಾಜ್ ಶೇರಗಾರ, ಗಣೇಶ್ ಪೂಜಾರಿ ಅವರಿಗೆ ಮಾ 19ರ ತನಕ ನ್ಯಾಯಾಂಗ ಬಂಧನ ವಿಧಿಸಿದೆ.
ಈ ಪ್ರಕರಣಕ್ಕೆ ಸಂಬಂಧಿದಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅಣ್ಣಾಮಲೈ ಅವರು ಮುಂದಿನ ಹೆಚ್ಚುವರಿ ತನಿಖೆಯನ್ನು ಕುಂದಾಪುರ ಡಿವೈಎಸ್ಪಿ ಮಂಜುನಾಥ ಶೆಟ್ಟಿ ಅವರಿಗೆ ವಹಿಸಿದ್ದು ಇನ್ನಷ್ಟು ಮಹತ್ವದ ತನಿಖೆಗಳು ನಡೆಯುತ್ತಿದೆ ಎನ್ನಲಾಗಿದೆ.