ಮಂಗಳೂರು, ಮಾ.9: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಮಿಗ್ರೇಷನ್ ಮತ್ತು ಕಸ್ಟಂಮ್ಸ್ ಅಧಿಕಾರಿಗಳು ಕೇರಳದ ಪ್ರಯಾಣಿಕರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಕೇರಳ ಸ್ಟೇಟ್ ಮುಸ್ಲಿಮ್ ಯೂತ್ ಲೀಗ್ ವತಿಯಿಂದ ಬುಧವಾರ ಬೆಳಗ್ಗೆ ವಿಮಾನ ನಿಲ್ದಾಣದ ಸಮೀಪ ಬೃಹತ್ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ನೂರಾರು ಮಂದಿ ಪಾಲ್ಗೊಂಡಿದ್ದರು. ಪ್ರತಿಭಟನಾ ಸಭೆಯ ಬಳಿಕ ಮಂಜೇಶ್ವರ ಶಾಸಕ ಅಬ್ದುಲ್ ರಝಾಕ್ ನೇತೃತ್ವದ ನಿಯೋಗವು ವಿಮಾನ ನಿಲ್ದಾಣದ ನಿರ್ದೇಶಕ ಜಿ.ಟಿ. ರಾಧಾಕೃಷ್ಣ ಅವರಿಗೆ ಮನವಿ ಸಲ್ಲಿಸಿ, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿತು.