ಕನ್ನಡ ವಾರ್ತೆಗಳು

ಜಯಪ್ರಕಾಶ್ ಹೆಗ್ಡೆ ಬೆಂಬಲಿಗರಿಂದ ‘ಜನಪರ-ಪ್ರಗತಿಪರ’ ವೇದಿಕೆ ಸ್ಥಾಪನೆ; ಮೌಲಿಕ ರಾಜಕಾರಣವನ್ನು ಎತ್ತಿ ಹಿಡಿಯುವ ಚಿಂತನೆ

Pinterest LinkedIn Tumblr

ಕುಂದಾಪುರ: ಕಳೆದ ವಿಧಾನಪರಿಷತ್ ಚುನಾವಣೆಯ ವೇಳೆ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆಗೊಂಡಿದ್ದ ಮಾಜಿ ಸಚಿವ ಹಾಗೂ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆಯವರ ಬೆಂಬಲಿಗರ, ಹಿತೈಷಿಗಳ ಮತ್ತು ಸಮಾನ ಮನಸ್ಕರ ಸಭೆಯು ಗುರುವಾರ ಕುಂದಾಪುರದ ಹಿರಿಯ ರಾಜಕಾರಣಿ ಮಾಣಿಗೋಪಾಲ್‌ರವರ ನಿವಾಸದಲ್ಲಿ ಜರುಗಿತು.

????????????????????????????????????

ಈ ಸಂದರ್ಭದಲ್ಲಿ ಮೌಲಿಕ ರಾಜಕಾರಣವನ್ನು ಎತ್ತಿ ಹಿಡಿಯುವ ಮತ್ತು ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ನಿಟ್ಟಿನಲ್ಲಿ ‘ಜನಪರ, ಪ್ರಗತಿಪರ’ ಎಂಬ ಸಂಘಟನೆಯೊಂದನ್ನು ಹುಟ್ಟುಹಾಕಲಾಯಿತು. ಇದೇ ಸಂದರ್ಭದಲ್ಲಿ ಸಂಘಟನೆಗೆ ತಾತ್ಕಾಲಿಕ ಸಂಚಾಲನಾ ಸಮಿತಿಯನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಮಾಣಿ ಗೋಪಾಲ ಅವರು ಮುಖ್ಯ ಸಂಚಾಲಕರಾಗಿಯೂ, ವಿ. ಚಂದ್ರಶೇಖರ ಹೆಗ್ಡೆ ದಬ್ಬೆಕಟ್ಟೆ, ಕಾಳಪ್ಪ ಪೂಜಾರಿ, ರಾಮಕೃಷ್ಣ ಹೇರ್ಳೆ, ಗಿರೀಶ್ ಜಿ.ಕೆ, ಶೈಲೇಶ್ ಕುಂದಾಪುರ ಮತ್ತು ಕಾಳಾವರ ಶ್ರೀಧರ್ ಆಚಾರ್ಯ ಅವರನ್ನು ಸಹಸಂಚಾಲಕರಾಗಿಯೂ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಂತೋಷ್ ದೇವಾಡಿಗ ಕೆ.ಎನ್, ಸ್ಟೀವನ್ ಡಿ.ಕೋಸ್ತ, ವಿಜಯ ಡಿಸೋಜ, ನಾಗರಾಜ ಪುತ್ರನ್, ರಂಜಿತ್ ಕುಮಾರ್ ಶೆಟ್ಟಿ, ದೀಪಕ್ ನಾವುಂದ, ಸುಖ್‌ಪಾಲ್, ಚಂದ್ರಶೇಖರ ಶೆಟ್ಟಿ, ಸತೀಶ್ ಹೆಗ್ಡೆ, ಕೋಡಿ ಸುನಿಲ್ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.

ಮಾರ್ಚ್ ತಿಂಗಳ ಕೊನೆಯ ವಾರದಲ್ಲಿ ಸಂಘಟನೆಯ ವಿದ್ಯುಕ್ತ ಉದ್ಘಾಟನೆ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ರಾಜ್ಯದ ಪ್ರಮುಖ ಚಿಂತಕರು ಭಾಗವಹಿಸಲಿದ್ದಾರೆ ಎಂದು ಸಂಘಟನೆಯ ಪ್ರಮುಖರು ತಿಳಿಸಿದ್ದಾರೆ.

Write A Comment