ಕುಂದಾಪುರ: ಸ್ಯಾಂಡಲ್ ವುಡ್ ಖ್ಯಾತ ನಟ ಮುಂಗಾರುಮಳೆ ಖ್ಯಾತಿಯ ಗೋಲ್ಡನ್ ಸ್ಟಾರ್ ಗಣೇಶ್ ಕೊಲ್ಲೂರು ಶೀ ಮೂಕಾಂಬಿಕ ದೇವಸ್ಥಾನಕ್ಕೆ ಭೇಟಿ ನೀಡಿದರು.
ಶುಕ್ರವಾರದಂದು ದೇವಸ್ಥಾನಕ್ಕೆ ಆಗಮಿಸಿದ ಅವರು ಶ್ರೀ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ದೇಗುಲದ ಕಾರ್ಯನಿರ್ವಹಣಾಧಿಕಾರಿ ಟಿ.ಆರ್. ಉಮಾ, ಉಪಕಾರ್ಯನಿರ್ವಹಣಾಧಿಕಾರಿ ಕೃಷ್ಣಮೂರ್ತಿ, ಅಧೀಕ್ಷಕ ರಾಮಕೃಷ್ಣ ಅಡಿಗ ಮೊದಲಾದವರು ಉಪಸ್ಥಿತರಿದ್ದು ಗಣೇಶ್ ಅವರನ್ನು ಆದರದಿಂದ ಬರಮಾಡಿಕೊಂಡರು.