ಮಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡ್ಡಿಯೂರಪ್ಪರವರನ್ನು ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾಮಕರಣ ಮಾಡಿದ ಹಿನ್ನೆಲೆಯಲ್ಲಿ ಬಿಜೆಪಿ ದ.ಕ.ಜಿಲ್ಲಾ ಘಟಕದ ವತಿಯಿಂದ ಶುಕ್ರವಾರ ಸಂಜೆ ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ ಆಚರಿಸಲಾಯಿತು.
ಮಂಡಲ ಅಧ್ಯಕ್ಷ ರವಿಶಂಕರ್ ಮಿಜಾರ್, ಮಾಜಿ ಎಂ.ಎಲ್.ಸಿ.ಮೋನಪ್ಪ ಭಂಡಾರಿ, ಮಾಜಿ ಉಪಸಭಾಪತಿ ಎನ್. ಯೋಗೀಶ್ ಭಟ್, ಮನಪಾ ಸದಸ್ಯರುಗಳು ಮತ್ತು ಅನೇಕ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದರು.