ಮ೦ಗಳೂರು, ಮೇ.8 : ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಕೇರಳಕ್ಕೆ ಹೋಗುವ ಮಾರ್ಗ ಮಧ್ಯೆ ಭಾನುವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಬೆಳಿಗ್ಗೆ 9.45ಕ್ಕೆ ಬಾರತೀಯ ವಾಯುಪಡೆಯ ವಿಮಾನದಲ್ಲಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಪ್ರಧಾನಿಯವರನ್ನು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ, ಪೊಲೀಸ್ ಆಯುಕ್ತ ಚಂದ್ರಶೇಖರ್, ಉಪಮೇಯರ್ ಸುಮಿತ್ರಾ ಸ್ವಾಗತಿಸಿದರು.ಬಳಿಕ ಪ್ರಧಾನಮಂತ್ರಿಯವರು ಅಲ್ಲಿಂದಲೇ ಹೆಲಿಕಾಪ್ಟರ್ ಮೂಲಕ ಕಾಸರಗೋಡಿಗೆ ತೆರಳಿದರು.