ಉಡುಪಿ: ಬೆಳಪು ಗ್ರಾಮ ಪಂಚಾಯತ್ ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ್ ಸೊರಕೆ ಮಂಗಳವಾರ ಚಾಲನೆ ನೀಡಿದರು.
15 ಲಕ್ಷ ರೂ ಮೊತ್ತದ ಪರಿಶಿಷ್ಠ ಕಾಲನಿಗೆ ಹೋಗುವ ರಸ್ತೆ ಅಭಿವೃದ್ಧಿ, 12 ಲಕ್ಷ ರೂ ಮೊತ್ತದ ಅಂಬೇಡ್ಕರ್ ಕಾಲನಿಗೆ ಹೋಗುವ ರಸ್ತೆ ಅಭಿವೃದ್ಧಿ, 10 ಲಕ್ಷ ಮೊತ್ತದ ಪ.ಜಾತಿ ಕಾಲನಿ ರಸ್ತೆ ಅಭಿವೃದ್ಧಿ, 5 ಲಕ್ಷ ಮೊತ್ತದ ಪ.ಪಂಗಡ ಕಾಲೋನಿ ರಸ್ತೆ ಅಭಿವೃದ್ಧಿ, 5 ಲಕ್ಷ ಮೊತ್ತದ ರಸ್ತೆ ಸೇರಿದಂತೆ ಒಟ್ಟು 47 ಲಕ್ಷ ರೂ ಮೊತ್ತದ ಕಾಮಗಾರಿಗೆ ಸಚಿವರು ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭದಲ್ಲಿ ಬೆಳಪು ಗ್ರಾ.ಪಂ. ಅಧ್ಯಕ್ಷ ದೇವಿ ಪ್ರಸಾದ್ ಶೆಟ್ಟಿ , ಉಪಾಧ್ಯಕ್ಷ ಶೋಭಾ ಭಟ್, ಪಂಚಾಯತ್ ನ ಸದಸ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Comments are closed.