ದುಬೈ, ಸೆ.26:ಕರ್ನಾಟಕ ರಾಜ್ಯ ಎಸ್ಸೆಸ್ಸೆಫ್ನ ಬೆಳ್ಳಿಹಬ್ಬ ಹಾಗೂ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ರವರ ‘ಕರ್ನಾಟಕ ಯಾತ್ರೆ’ಯ ಪ್ರಯುಕ್ತ ಕರ್ನಾಟಕ ಕಲ್ಚರಲ್ ಫೌಂಡೇಶನ್ನ ಯುಎಇ ಸಮಿತಿ ದುಬೈಯ ಖಿಸೈಸ್ನ ಇಂಡಿಯನ್ ಅಕಾಡಮಿ ಸ್ಕೂಲ್ನಲ್ಲಿ ಶುಕ್ರವಾರ ಆಯೋಜಿಸಿದ್ದ ಬೃಹತ್ ಮಾನವತಾ ಸಮಾವೇಶವನ್ನು ಕರ್ನಾಟಕ ರಾಜ್ಯ ಆರೋಗ್ಯ ಸಚಿವ ಯು.ಟಿ. ಖಾದರ್ ಉದ್ಘಾಟಿಸಿದರು.
ಈ ವೇಳೆ ವೇದಿಕೆಯಲ್ಲಿ ಕರ್ನಾಟಕ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಸಿ.ಎಂ.ಇಬ್ರಾಹೀಂ, ಪಿ.ಎಂ.ಇಬ್ರಾಹೀಂ ಮುಸ್ಲಿಯಾರ್ ಬೇಕಲ್, ಸೈಯದ್ ಫಝಲ್ ಕೋಯಮ್ಮ ತಂಙಳ್ ಕೂರತ್, ಪಿ.ಎಂ.ಅಬ್ಬಾಸ್ ಉಸ್ತಾದ್ ಮಂಜನಾಡಿ, ಎಂ.ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ, ಶಾಫಿ ಸಅದಿ ಬೆಂಗಳೂರು, ಎಮ್ಮೆಸ್ಸೆಂ ಅಬ್ದುರ್ರಶೀದ್ ಝೈನಿ ಕಾಮಿಲ್, ಬಿ.ಎಂ.ಮುಮ್ತಾಝ್ ಅಲಿ, ಹಾಜಿ ಶೇಖ್ ಬಾವ, ಸಲೀಂ ಅಲ್ತಾಫ್ ಫರಂಗಿಪೇಟೆ ಮತ್ತಿತರರು ಉಪಸ್ಥಿತರಿದ್ದರು.