ದುಬೈ: ದುಬೈಯ ಅಕ್ಮೆ ಬಿಲ್ಡಿಂಗ್ ಮೆಟೀರಿಯಲ್ಸ್ ನ ಕಚೇರಿಯಲ್ಲಿ ಸೋಮವಾರ ಸಂಜೆ ಆಯುಧ ಪೂಜೆಯನ್ನು ನೆರವೇರಿಸಲಾಯಿತು.
ಅಕ್ಮೆ ಬಿಲ್ಡಿಂಗ್ ಮೆಟೀರಿಯಲ್ಸ್ ನ ಆಡಳಿತ ನಿರ್ದೇಶಕ ಹರೀಶ ಶೇರಿಗಾರ್ ಹಾಗು ಅವರ ಧರ್ಮಪತ್ನಿ ಶರ್ಮಿಳಾ ಶೇರಿಗಾರ್ ಅವರ ಸಮ್ಮುಖದಲ್ಲಿ ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಕಚೇರಿಯ ಸಿಬ್ಬಂದಿಗಳು, ನೌಕರರು, ಬಂಧು ಮಿತ್ರರು ಪೂಜೆಯಲ್ಲಿ ಪಾಲ್ಗೊಂಡಿದ್ದರು. ಕಂಪೆನಿಯ ಎಲ್ಲ ವಾಹನಗಳನ್ನು ಹೂವುಗಳಿಂದ ಶೃಂಗರಿಸಿ, ಕುಂಕುಮ, ಅರಶಿನವನ್ನು ಹಚ್ಚಿ, ಅದಕ್ಕೆ ನಿಂಬೆ ಹಣ್ಣು ಕಟ್ಟಿ,ಕುಂಬಳ ಕಾಯಿ ಒಡೆದು ಪೂಜೆ ಸಲ್ಲಿಸಲಾಯಿತು.
ಬಾಲಕೃಷ್ಣ ಶೆಟ್ಟಿ ವಿಧಿವತ್ತಾಗಿ ಪೂಜಾ ಕೈಕಂಕರ್ಯಗಳು ನೆರವೇರಿಸಿದರು. ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು. ಈ ಸಂದರ್ಭದಲ್ಲಿ ಹರೀಶ ಶೇರಿಗಾರ್ ಅವರ ಮಕ್ಕಳು, ಸಹೋದರ ದಿನೇಶ್ ಶೇರಿಗಾರ್, ಅವರ ಪತ್ನಿ ವಿದ್ಯಾ ದಿನೇಶ್ ಶೇರಿಗಾರ್, ಪುತ್ರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Comments are closed.