Photo : Ashok Belman
ದುಬೈ: ದುಬೈ ಕಿಸೆಸ್ಸ್’ನಲ್ಲಿರುವ ಫೋರ್ಚುನ್ ಪ್ಲಾಜಾ ಹೋಟೆಲ್’ನಲ್ಲಿ ಸರ್ವ ಕನ್ನಡಪರ ಸಂಘಟನೆಗಳ ನೇತೃತ್ವದಲ್ಲಿ ಗುರುವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕುಂದಾಪುರದ ಜನಪ್ರಿಯ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಪೌರ ಸನ್ಮಾನ ನೀಡಿ ಗೌರವಿಸಲಾಯಿತು.
ಫೋರ್ಚುನ್ ಗ್ರೂಪ್ ಆಫ್ ಹೋಟೆಲ್ಸ್’ನ ಮಾಲಕ ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಉದ್ಯಮಿಗಳಾದ ರಾಜ್ ಶೆಟ್ಟಿ, ಸರ್ವೋತ್ತಮ ಶೆಟ್ಟಿ, ಎಂ.ಇ.ಮೂಳೂರು, ಜೇಮ್ಸ್ ಮೆಂಡೋನ್ಸಾ, ಪ್ರಭಾಕರ ಅಂಬಲತೆರೆ ದೀಪ ಬೆಳಗಿಸಿ ಉದ್ಹಾಟಿಸಿದರು.
ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರನ್ನು ಎಲ್ಲರ ಸಮ್ಮುಖದಲ್ಲಿ ಅತಿಥಿಗಳು ಶಾಲು ಹೊದಿಸಿ, ಹಣ್ಣು-ಹಂಪಲು ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಈ ವೇಳೆ ಪ್ರವೀಣ್ ಶೆಟ್ಟಿ ಹಾಲಾಡಿ ಕುರಿತು ಮಾತನಾಡಿದರು.
ಬಳಿಕ ಪೌರ ಸನ್ಮಾನ ಸ್ವೀಕರಿಸಿ ಸಂವಾದದಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿ ತಮ್ಮ ಅಭಿಪ್ರಾಯ ಹಾಗು ಸಭಿಕರ ಪ್ರಶ್ನೆಗಳಿಗೆ ಉತ್ತರಿಸಿದರು. ಸಂವಾದ ಕಾರ್ಯಕ್ರಮವನ್ನು ಅವಿನಾಶ್ ಕಾಮತ್ ನಡೆಸಿಕೊಟ್ಟರು. ಇದೆ ವೇಳೆ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಯುಎಇಯಲ್ಲಿರುವ ವಿವಿಧ ಸಂಘ-ಸಂಸ್ಥೆಗಳ ವತಿಯಿಂದ ಸನ್ಮಾನಿಸಲಾಯಿತು.
ಪ್ರಭಾಕರ ಅಂಬಲತೆರೆ ಅತಿಥಿಗಳನ್ನು ಸ್ವಾಗತಿಸಿದರು. ವಿನಯ್ ನಾಯಕ್ ಕಾರ್ಯಕ್ರಮ ನಡೆಸಿಕೊಟ್ಟರು.
Comments are closed.