ಗಲ್ಫ್

ಅಜ್ಮಾನಿನಲ್ಲಿ ಸಂಭ್ರಮದ ಗಣೇಶೋತ್ಸವ ಕಾರ್ಯಕ್ರಮ

Pinterest LinkedIn Tumblr

Photo:Ashok Belman

ದುಬೈ: ಇಲ್ಲಿನ :ಮಾರ್ಗದೀಪ ಸಾರ್ವಜನಿಕ ಗಣೇಶೋತ್ಸವ ಸಮಿತಿಯ 4 ನೇ ವರ್ಷದ ಶ್ರೀ ಗಣೇಶೋತ್ಸವ ಕಾರ್ಯಕ್ರಮವು ಅಜ್ಮಾನ್ ನ ಯೂತ್ ಸೆಂಟರ್ ನಲ್ಲಿ ಶುಕ್ರವಾರ ಬಹಳ ವಿಜೃಂಭಣೆಯಿಂದ ನಡೆಯಿತು.

ಬೆಳಗ್ಗಿನಿಂದ ಸಂಜೆಯವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ಭಕ್ತಿ ಪೂರ್ವಕವಾಗಿ ಆಚರಿಸಲಾಯಿತು. ಬೆಳಿಗ್ಗೆ ಗಣೇಶ ವಿಗ್ರಹ ಪ್ರತಿಷ್ಠಾಪನೆಗೊಂಡು ನಂತರ ದುಬಾಯಿಯ ವಿವಿಧ ಭಜನಾ ಸಂಘ ಸಂಸ್ಥೆಗಳ ತಂಡದವರಿಂದ ಭಜನಾ ಕಾರ್ಯಕ್ರಮ ಜರಗಿತು. ಮಧ್ಯಾಹ್ನ ಶ್ರೀ ದೇವರಿಗೆ ಮಹಾ ಮಂಗಳಾರತಿ ಹಾಗೂ ತೀರ್ಥಪ್ರಸಾದ ಅನ್ನದಾನ ಜರಗಿತು

ಕರ್ನಾಟಕ ಸರಕಾರದ ಮಾಜಿ ಸಚಿವರಾದ ಕೃಷ್ಣ.ಜೆ ಪಾಲೇಮಾರ್, ಜೆ.ಕೆ ರಾವ್, ಮಾರ್ಗದೀಪ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಪ್ರಭಾಕರ್ ಅಂಬಲ್ತಾರೆ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು.

ಮಧ್ಯಾಹ್ನದ ಮೇಲೆ ಸಾಯಿ ಮಲ್ಲಿಕ ತಂಡದವರಿಂದ ಭಕ್ತಿ ರಸಮಂಜರಿ ಕಾರ್ಯಕ್ರಮ ಜರಗಿತು.ನಂತರ ಮಾರ್ಗದೀಪ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ರಾಜೇಶ್ ರಾವ್ ರವರ ಅಧ್ಯಕ್ಷತೆಯಲ್ಲಿ ಸಭಾಕಾರ್ಯಕ್ರಮ ಜರಗಿತು.

ಕಾರ್ಯಕ್ರಮದ ನಿರೂಪನೆಯನ್ನು ಸುಗಂದ್ ರಾಜ್ ಬೇಕಲ್ ನಿರ್ವಹಿಸಿದರು. ಕಾರ್ಯದರ್ಶಿ ಅಜಿತ್ ಬೇಕಲ್ ಧನ್ಯವಾದವಿತ್ತರು. ಸಂಜೆ 5.00 ಗಂಟೆಗೆ ಶ್ರೀ ಗಣೇಶನ ಮೆರವಣಿಗೆಯೊಂದಿಗೆ ವಿಸರ್ಜನೆ ಜರಗಿತು.

 

Comments are closed.