ಕೋಲ್ಕತ್ತಾ, ಡಿ.7: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ಅವರು ನಡೆಸಿದ ಕೋಲ್ಕತ್ತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಾರಣಕ್ಕಾಗಿಯೇ ಟಿಎಂಸಿ ಕಾರ್ಯಕರ್ತನೊಬ್ಬ ಬಿಜೆಪಿ ಕಾರ್ಯಕರ್ತನಿಗೆ ಸಿಗರೇಟ್ನಿಂದ ಸುಟ್ಟು ಗಾಯಗೊಳಿಸಿರುವ ಅಮಾನವೀಯ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.
ಕಳದೆ ಭಾನುವಾರ ಅಮಿತ್ ಷಾ ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಿದ್ದರು. ಇದಕ್ಕೆ ಬಿಜೆಪಿ ಕಾರ್ಯಕರ್ತ ಬಿಷ್ಣು ಚೌಧರಿ ಎಂಬಾತ ಭಾಗವಹಿಸಿದ್ದ. ಇದನ್ನು ಸಹಿಸದ ಟಿಎಂಸಿ ಕಾರ್ಯಕರ್ತರು ಆತನ ಮೇಲೆ ದೈಹಿಕ ಹಲ್ಲೆ ನಡೆಸಿ ಸಿಗರೇಟ್ನಿಂದ ಸುಟ್ಟು ಗಾಯಗೊಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಆತ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ತನ್ನನ್ನು ಟಿಎಂಸಿ ಪಕ್ಷಕ್ಕೆ ಸೇರ್ಪಡೆಯಾಗುವಂತೆ ಕೆಲವರು ಒತ್ತಡ ಹಾಕಿದರು. ಇದಕ್ಕೆ ನಾನು ಒಪ್ಪದಿದ್ದಾಗ ನನ್ನ ಮೇಲೆ ಕೆಲವರು ಹಲ್ಲೆ ನಡೆಸಿ ಸಿಗರೇಟ್ನಿಂದ ಸುಟ್ಟು ಗಾಯಗೊಳಿಸಿದ್ದಾರೆಂದು ಬಿಷ್ಣು ಚೌಧರಿ ಪೊಲೀಸರಿಗೆ ದೂರು ನೀಡಿದ್ದಾನೆ. ಅಲ್ಲದೆ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿ ತನಗೆ ಪ್ರಾಣ ರಕ್ಷಣೆ ನೀಡಬೇಕೆಂದು ಮನವಿ ಮಾಡಿದ್ದಾನೆ. ದೂರು ದಾಖಲಿಸಿರುವ ಆಯೋಗ ಸೂಕ್ತ ಭದ್ರತೆ ನೀಡುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸೂಚನೆ ಕೊಟ್ಟಿದೆ. ಈ ಪ್ರಕರಣ ಬಿಜೆಪಿ ಮತ್ತು ಟಿಎಂಸಿ ನಡುವೆ ವಾಕ್ಸ್ಮರಕ್ಕೆ ದಾರಿಮಾಡಿಕೊಟ್ಟಿದೆ. ಬಿಜೆಪಿ ಕಾರ್ಯಕರ್ತನ ಆರೋಪವನ್ನು ಟಿಎಂಸಿ ನಿರಕಾರಿಸಿದೆ.