ರಾಷ್ಟ್ರೀಯ

10 ಮಕ್ಕಳನ್ನು ಹೆತ್ತು ಮೋದಿಯನ್ನು ಮತ್ತೆ ಪ್ರಧಾನಿ ಮಾಡಿ’

Pinterest LinkedIn Tumblr

shankaracharyayaya

ಅಲಹಾಬಾದ್, ಜ.18: ನರೇಂದ್ರಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಬೇಕಾದರೆ ಪ್ರತಿಯೊಬ್ಬ ಹಿಂದೂ ಮಹಿಳೆ 10 ಮಕ್ಕಳನ್ನು ಹೆರಬೇಕೆಂದು ಬದ್ರಿಕಾಶ್ರಮದ ಶಂಕರಾಚಾರ್ಯ ವಸುದೇವಾನಂದ ಸರಸ್ವತಿ ಸ್ವಾಮೀಜಿ ಕರೆಕೊಟ್ಟಿದ್ದಾರೆ.

ಅಲಹಾಬಾದ್‌ನಲ್ಲಿ ನಡೆಯುತ್ತಿರುವ ಹಿಂದೂ ಸಮ್ಮೇಳನದಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಹಿಂದೂಗಳೇ ಬಹುಸಂಖ್ಯಾತರಾಗಬೇಕಿತ್ತು. ಇತ್ತೀಚಿನ ದಿನಗಳಲ್ಲಿ ನಮ್ಮ ಜನಸಂಖ್ಯೆ ಕಡಿಮೆಯಾಗುತ್ತಿದ್ದು, ನಾವೇ ಅಲ್ಪಸಂಖ್ಯಾತರಾಗುತ್ತಿದ್ದೇವೆ ಎಂದು ವಿಷಾದಿಸಿದ್ದಾರೆ.

ಮೋದಿ ಮತ್ತೊಮ್ಮೆ ಪ್ರಧಾನಿಯಾಗಿ ಹಿಂದೂಧರ್ಮವನ್ನು ಉಳಿಸಬೇಕಾದರೆ ಪ್ರತಿಯೊಬ್ಬ ಹಿಂದೂ ಮಹಿಳೆ 4 ಮಕ್ಕಳ ಬದಲಿಗೆ 10 ಮಕ್ಕಳನ್ನು ಹೆರಬೇಕು. ಇದರಿಂದ ಭಾರತ ಹಿಂದೂರಾಷ್ಟ್ರವಾಗಿ ಉಳಿಯುತ್ತದೆ ಎಂದು ಪ್ರತಿಪಾದಿಸಿದ್ದಾರೆ.

ಘರ್ ವಾಪಸಿ (ಮರಳಿ ಮನೆಗೆ) ಮಾತನಾಡಿರುವ ಶಂಕರಾಚಾರ್ಯ ವಸುದೇವಾನಂದ ಸರಸ್ವತಿ, ಕ್ರಿಶ್ಚಿಯನ್, ಇಸ್ಲಾಂ, ಸಿಖ್ ಸೇರಿದಂತೆ ಎಲ್ಲ ಧರ್ಮಗಳಲ್ಲೂ ಮತಾಂತರಗೊಂಡವರು ತಮ್ಮ ತಮ್ಮ ಧರ್ಮಕ್ಕೆ ಹಿಂತಿರುಗುತ್ತಿದ್ದಾರೆ. ಅದರಲ್ಲಿ, ಹಿಂದೂ ಧರ್ಮದಿಂದ ಮತಾಂತರಗೊಂಡವರು ಪುನಃ ಅದೇ ಧರ್ಮಕ್ಕೆ ಬರುವುದರಲ್ಲಿ ತಪ್ಪೇನು ಎಂದು ಪ್ರಶ್ನಿಸಿದರು.

ಕೆಲ ದಿನಗಳ ಹಿಂದೆ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್, ಪ್ರತಿಯೊಬ್ಬ ಹಿಂದೂ ಮಹಿಳೆ ನಾಲ್ಕು ಮಕ್ಕಳನ್ನು ಹೆರಬೇಕೆಂದು ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದರು. ತದನಂತರ ಶಾಮಲ್ ಗೋಸ್ವಾಮಿ 4 ಮಕ್ಕಳ ಬದಲಿಗೆ 5 ಮಕ್ಕಳನ್ನು ಹೆರುವಂತೆ ಹೇಳಿಕೆ ನೀಡಿದ್ದರು.

Write A Comment