ರಾಷ್ಟ್ರೀಯ

ಕೇಂದ್ರ ಬಜೆಟ್ ಪ್ರತಿ ಲೀಕ್ : ಯಾರೇ ಆಗಿದ್ದರೂ ಶಿಕ್ಷೆ

Pinterest LinkedIn Tumblr

Rajnath singh

ನವದೆಹಲಿ,ಫೆ.21: ಬಜೆಟ್ ಪ್ರತಿ ಲಿಕೇಜ್ ಪ್ರಕರಣದಲ್ಲಿ ಭಾಗಿಯಾದವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಅವರು ಯಾರೇ ಆಗಿದ್ದರೂ ತಕ್ಕ ಶಾಸ್ತಿಯಾಗಲಿದೆ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.

ಪ್ರಕರಣ ಕುರಿತಂತೆ ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದು, ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ದೂದ್ ಕಾ ದೂದ್, ಪಾನಿ ಕಾ ಪಾನಿ ಮಾದರಿಯಲ್ಲಿ ಆದಷ್ಟು ಶೀಘ್ರ ತನಿಖೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಬಜೆಟ್ ಪ್ರತಿ ಲೀಕೇಜ್ ಮಾಡಿದಂತೆ ಇತರ ಸಚಿವಾಲಯಗಳಲ್ಲೂ ಅಂತಹ ವ್ಯಕ್ತಿಗಳು ಇರಬಹುದೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸರ್ಕಾರದಲ್ಲಿ ಸೇವೆ ಸಲ್ಲಿಸುತ್ತಿರುವವರು ಇಂತಹ ನೀಚ ಕೃತ್ಯಗಳಲ್ಲಿ ಪಾಲ್ಗೊಳ್ಳುತ್ತಿರುವುದು ಖಂಡನೀಯ ಎಂದರು. ಇತರೆ ಕಡೆಯೂ ಅಂತಹ ವ್ಯಕ್ತಿಗಳು ಇರಬಹುದು. ಆ ಕುರಿತಂತೆಯೂ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚಿಸುವುದಾಗಿ ತಿಳಿಸಿದರು. ಬಜೆಟ್ ಪ್ರತಿ ಲಿಕೇಜ್ ಪ್ರಕರಣದಲ್ಲಿ ಇದುವರೆಗೂ ೧೨ ಮಂದಿಯನ್ನು ಬಂಧಿಸಲಾಗಿದ್ದು, ಉಳಿದ ಆರೋಪಿಗಳ ಪತ್ತೆಗೂ ಕ್ರಮ ಕೈಗೊಳ್ಳಲಾಗಿದೆ ಎಂದರು.

Write A Comment