ರಾಷ್ಟ್ರೀಯ

ಜಯಲಲಿತಾಳಿಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಎಐಎಡಿಎಂಕೆ ಶಾಸಕ

Pinterest LinkedIn Tumblr

jaya

ಚೆನ್ನೈ: ಎಐಎಡಿಎಂಕೆ ಮುಖ್ಯಸ್ಥೆ ಜೆ.ಜಯಲಲಿತಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅನುವಾಗುವಂತೆ ಡಾ. ಆರ್‌.ಕೆ.ನಗರ ಶಾಸಕ ವೆಟ್ರಿವೇಲು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಡಾ.ಆರ್‌ಕೆ.ನಗರ್ ಕ್ಷೇತ್ರ ಎಐಎಡಿಎಂಕೆ ಪಕ್ಷದ ಬಲಾಢ್ಯ ಭದ್ರಕೋಟೆಯಾಗಿದ್ದು, ಜಯಲಲಿತಾ ಅಲ್ಲಿಂದಲೇ ಸ್ಪರ್ಧಿಸಲು ಬಯಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಜಯಲಲಿತಾ ಮೇ 22 ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಗಳಿವೆ. ಮುಖ್ಯಮಂತ್ರಿಯಾದ ಆರು ತಿಂಗಳೊಳಗೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲಬೇಕಾದ ಅನಿವಾರ್ಯತೆ ಜಯಲಲಿತಾ ಅವರಿಗೆ ಎದುರಾಗಿದೆ.

ಅಕ್ರಮ ಆಸ್ತಿ ಪ್ರಕರಣದಲ್ಲಿ ನಿರ್ದೋಷಿ ಎಂದು ಹೈಕೋರ್ಟ್ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಮತ್ತೆ ಮುಖ್ಯಮಂತ್ರಿಯಾಗುವ ಅದೃಷ್ಟ ಒಲಿದು ಬಂದಿದೆ.

Write A Comment