ರಾಷ್ಟ್ರೀಯ

ಪ್ರಧಾನಿ ಮೋದಿ ಅವಧಿಯಲ್ಲೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕು: ಸಾಧ್ವಿ ಪ್ರಾಚಿ

Pinterest LinkedIn Tumblr

sadvi-prachi

ಜಲಂಧಾರ್: ಪವಿತ್ರ ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕು ಎಂಬ ಕೂಗು ಇದೀಗ ಬಲವಾಗುತ್ತಿದೆ. ಪ್ರಧಾನಿ ನರೇಂದ್ರಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಈ ಅವಧಿಯಲ್ಲೇ ರಾಮಮಂದಿರ ನಿರ್ಮಾಣವಾಗಬೇಕು ಎಂದು ವಿಎಚ್ ಪಿ ನಾಯಕಿ ಸಾಧ್ವಿ ಪ್ರಾಚಿ ಹೇಳಿದ್ದಾರೆ.

ಬಿಜೆಪಿ ದಲಿತ ಮೋರ್ಚಾ ಆಯೋಜಿಸಿದ್ದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಭಾಗವಹಿಸಲು ಆಗಮಿಸಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಕೂಡಲೇ ಆರಂಭವಾಗಬೇಕು. ಹಾಗೆಯೇ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಕಾಲದಲ್ಲೇ ರಾಮಮಂದಿರ ನಿರ್ಮಾಣ ಕೆಲಸ ಪೂರ್ಣವಾಗಬೇಕು ಎಂದು ಆಗ್ರಹಿಸಿದ್ದಾರೆ.

ಈ ಬಗ್ಗೆ ವಿಶ್ವ ಹಿಂದೂ ಪರಿಷತ್ ಕೇಂದ್ರೀಯ ಮಾರ್ಗದರ್ಶಕ್ ಮಂಡಲ್ ನಲ್ಲಿ ನಡೆಯಲಿರುವ 2 ದಿನಗಳ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಚಿ ತಿಳಿಸಿದರು.  ಮೇ 25ರಂದು ಹರಿದ್ವಾರದಲ್ಲಿ 2 ದಿನಗಳ ಮಹತ್ವದ ಸಭೆ ನಡೆಯಲಿದೆ ಎಂದರು.

Write A Comment