ನವದೆಹಲಿ (ಪಿಟಿಐ): ಮಾಜಿ ಯೋಧರಿಗೆ ‘ಒಂದು ರ್ಯಾಂಕ್ ಒಂದು ಪಿಂಚಣಿ‘(ಒಆರ್ಒಪಿ) ಯೋಜನೆಯನ್ನು ಜಾರಿಗೊಳಿಸುವಲ್ಲಿ ಬದ್ಧವಾಗಿರುವುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಶನಿವಾರ ಟ್ವೀಟ್ ಮಾಡಿದ್ದಾರೆ.
ಈ ಯೋಜನೆಯ ಅನ್ವಯ ಯಾವುದೇ ತಾರತಮ್ಯ ಇಲ್ಲದೆ ಎಲ್ಲಾ ಮಾಜಿ ಯೋಧರಿಗೂ ಸಮಾನ ಪಿಂಚಣಿ ಲಭ್ಯವಾಗಲಿದೆ ಎಂದು ಮೋದಿ ತಿಳಿಸಿದ್ದಾರೆ.
ಕಳೆದೊಂದು ವರ್ಷದ ಆಡಳಿತದಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ನೀಡಿದ್ದೇವೆ ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ. ಭ್ರಷ್ಟಾಚಾರ ರಹಿತ ಆಡಳಿತ ನೀಡಿದ್ದಕ್ಕೆ ನನಗೆ ಹೆಮ್ಮೆ ಎನಿಸಿದೆ ಎಂದು ಮೋದಿ ಹೇಳಿದ್ದಾರೆ.
ಭ್ರಷ್ಟಾಚಾರ ರಹಿತ ಆಡಳಿತ ನೀಡುವುದು ನಮ್ಮ ಆದ್ಯತೆಯಾಗಿತ್ತು. ಅದರಂತೆ ನಾವು ನಡೆದುಕೊಂಡಿದ್ದೆವೆ. ಈಗ ನಮ್ಮ ಮುಂದೆ ಇರುವ ಗುರಿ ಅಭಿವೃದ್ಧಿ ಮಾತ್ರ ಎಂದು ಮೋದಿ ತಿಳಿಸಿದ್ದಾರೆ.