ರಾಷ್ಟ್ರೀಯ

ಮಾಜಿ ಸಚಿವ ತೋಮರ್ ಜಾಮೀನು ಅರ್ಜಿ ವಜಾ

Pinterest LinkedIn Tumblr

tomar

ನವದೆಹಲಿ, ಜೂ.11: ನಕಲಿ ಪದವಿ ಪ್ರಮಾಣ ಪತ್ರ ಪಡೆದು ವಂಚನೆ ಮಾಡಿದ್ದಾರೆಂಬ ಆರೋಪದಲ್ಲಿ ಬಂಧಿತರಾಗಿದ್ದ ದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದ್ದು, ಜೂನ್ 13ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಬಿಹಾರ ವಿ.ವಿ ಯಿಂದ ನಕಲಿ ಪದವಿ ಪ್ರಮಾಣ ಪತ್ರ ಪಡೆದು ವಂಚಿಸಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಇವರನ್ನು ಬಂಧಿಸಿದ್ದರು. ಬಂಧಿತ ಜಿತೇಂದ್ರ ಸಿಂಗ್ ತೋಮರ್ ತಮಗೆ ಜಾಮೀನು ನೀಡಬೇಕೆಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ದೆಹಲಿ ಸಾಕೇತ್ ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಸದ್ಯ ಇವರು ಪೊಲೀಸ್ ವಶದಲ್ಲಿದ್ದಾರೆ.

Write A Comment