ರಾಷ್ಟ್ರೀಯ

ಹೊತ್ತಿ ಉರಿದ ಹೋಟೆಲ್ : ಹತ್ತು ಮಂದಿ ಸಜೀವ ದಹನ

Pinterest LinkedIn Tumblr

4475fire-buildingಉತ್ತರಪ್ರದೇಶದ ಪ್ರತಾಪ್ಘರ್ ನಲ್ಲಿರುವ ಆರ್ಯನ್ ಹೋಟೆಲ್ ನಲ್ಲಿ ಶುಕ್ರವಾರ ಬೆಳಿಗ್ಗೆ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು ಈ ದುರಂತದಲ್ಲಿ 10 ಮಂದಿ ಸಜೀವ ದಹನವಾಗಿರುವ ಘಟನೆ ನಡೆದಿದೆ.

ಇಂದು ಬೆಳಿಗ್ಗೆ 5 ರ ಸುಮಾರಿಗೆ ಹೋಟೆಲ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು ಅಲ್ಲಿಯೇ ಇದ್ದ 10 ಮಂದಿ ಸ್ಥಳದಲ್ಲಿಯೇ ಸಜೀವ ದಹನವಾಗಿದ್ದು 12 ಮಂದಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು ಹಲವರು ಬದುಕುವ ಸಾಧ್ಯತೆ ಕಡಿಮೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ.

ಹೋಟೆಲ್ ನಲ್ಲಿ 40 ರಿಂದ 50ಕ್ಕೂ ಹೆಚ್ಚು ಮಂದಿ ಇದ್ದು, ಘಟನೆಗೆ ನೈಜ ಕಾರಣ ಸ್ಪಷ್ಟವಾಗಿಲ್ಲ. ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿ ಶಾಮಕ ದಳದ ವಾಹನಗಳೊಂದಿಗೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ಆರಂಭಿಸಿದ್ದು, ಬೆಂಕಿ ನಂದಿಸಲು  ಹರಸಾಹಸ ಪಡುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Write A Comment