ಚೆನ್ನೈ: ತಮಿಳುನಾಡು ರಾಜಧಾನಿ ಚೆನ್ನೈ ನಗರದ ಅಂಬೂರಿನಲ್ಲಿ ಮುಸ್ಲಿಂ ಸಮುದಾಯದ ವ್ಯಕ್ತಿ ಶಮೀಲ್ ಹತ್ಯೆ ಪ್ರಕರಣವನ್ನು ವಿರೋಧಿಸುತ್ತಿದ್ದ ವೇಳೆ ಮುಸ್ಲಿಂ ಸಮುದಾಯ ಹಾಗೂ ಪೊಲೀಸರ ನಡುವೆ ಘರ್ಷಣೆ ಏರ್ಪಟ್ಟ ಹಿನ್ನೆಲೆಯಲ್ಲಿ ಸುಮಾರು 42 ಮಂದಿ ಪೊಲೀಸರು ಗಾಯಗೊಂಡಿರುವ ಘಟನೆ ತಡವಾಗಿ ಬೆಳಕ್ಗೆ ಬಂದಿದೆ.
ಈ ಘಟನೆಯು ನಿನ್ನೆ ರಾತ್ರಿ ನಡೆದಿದ್ದು, ಪಳನಿ ಎಂಬ ವ್ಯಕ್ತಿ ತನ್ನ ಹೆಂಡತಿ ಕಾಣೆಯಾಗಿದ್ದಾಳೆಂದು ಹೇಳಿ ಶಮೀಲ್ ಅಹ್ಮದ್(26) ವಿರುದ್ಧ ಪೊಲೀಸರಿಗೆ ದೂರು ನೀಡಿದ್ದ. ತನಿಖೆ ಕೈಗೊಂಡ ಪೊಲೀಸರು ಶಮೀಲ್ ಅಹ್ಮದ್ ಎಂಬ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಿದ್ದರು. ಅಲ್ಲದೆ, ಶಮೀಲ್ ಅಹ್ಮದ್ಗೆ ಹೊಡೆದು ಗಂಭೀರವಾಗಿ ಗಾಯಗೊಳಿಸಿದ್ದರು. ಈ ಹಿನ್ನೆಲೆಯಲ್ಲಿ ಅಮೀಲ್ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದರು.
ಇದೇ ಘಟನೆ ನಿನ್ನೆಯ ಘಟನೆಗೆ ಕಾರಣವಾಗಿದ್ದು, ಅಂಬೂರಿನಲ್ಲಿ ಘರ್ಷಣೆ ಏರ್ಪಟ್ಟಿದೆ. ಮುಸ್ಲಿಂ ಸಮುದಾಯದವರು ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆಗಳಿದಿದ್ದರು. ಪ್ರತಿಭಟನೆ ತೀವ್ರಗೊಂಡು ನಂತರ ಕಲ್ಲು ತೂರಾಟ ನಡೆದಿದೆ. ಈ ವೇಳೆ ಮಧ್ಯಪ್ರವೇಶಿಸಿದ ಪೊಲೀಸರ ಮೇಲೂ ಪ್ರತಿಭಟನಾಕಾರರು ತಮ್ಮ ಪ್ರತಾಪ ತೋರಿದ್ದು, ಪರಿಣಾಮ 42 ಮಂದಿ ಪೊಲೀಸರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಂಬೂರು ಡಿಎಸ್ಪಿ ಗಣೇಶನ್ ಅವರ ಕಾರು, ಸಿಬ್ಬಂದಿಯ ಎರಡು ವಾಹನ ಹಾಗೂ ಇತರೆ ಸರ್ಕಾರಿ ಬಸ್ಗಳಿಗೆ ಬೆಂಕಿ ಹಚ್ಚಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, 147ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.