ನವದೆಹಲಿ: ಉತ್ತರಾಖಂಡದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೇದಾರನಾಥದ ಬದರೀನಾಥ ದೇವಾಲಯದ ಸುತ್ತಮುತ್ತಲೂ ಸಾಕಷ್ಟು ಮಂದಿ ಸಾರ್ವಜನಿಕರು ಸಿಲುಕಿಕೊಂಡಿದ್ದು, ಅವರಲ್ಲಿ ರಾಜ್ಯದವರೂ ಸಿಲುಕಿದ್ದಾರೆ.
ರಾಜ್ಯದ ಮೈಸೂರು ಮತ್ತು ತುಮಕೂರು ಜಿಲ್ಲೆಯ 45ಕ್ಕೂ ಹೆಚ್ಚು ಮಂದಿ ಕೇದಾರನಾಥಕ್ಕೆ ತೆರಳಿದ್ದು, ತೊಂದರೆಗೆ ಸಿಕ್ಕಿದ್ದಾರೆ. ಈ ಎಲ್ಲರ ರಕ್ಷಣೆಗೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದ್ದು, ಕರ್ನಾಟಕ ಭವನದ ಸಿಬ್ಬಂದಿಗಳು ಅಗತ್ಯ ನೆರವು ನೀಡಲಿದ್ದಾರೆ. ರಾಜ್ಯದಿಂದ ನೆರವು ಕೊಡುವ ಸಲುವಾಗಿ ಉತ್ತರಾಖಂಡದ ಹಿರಿಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿರುವುದಾಗಿ ಈಗಾಗಲೇ ಕರ್ನಾಟಕ ಭವನದ ಮೂಲಗಳು ತಿಳಿಸಿವೆ.
ಸಂಕಷ್ಟದಲ್ಲಿರುವವರನ್ನು ಸ್ಥಳಾಂತರಿಸಲು ಈಗಾಗಲೇ ಉತ್ತರಾಖಂಡ ಸರ್ಕಾರ ಕ್ರಮ ಕೈಗೊಂಡಿದ್ದು, ಹೆಲಿಕಾಪ್ಟರ್ ಮೂಲಕ ರಕ್ಷಿಸಲಾಗುತ್ತಿದೆ. ಉತ್ತರಾಖಂಡದಿಂದ ದೆಹಲಿಗೆ ಬರುವ ಕರ್ನಾಟಕದವರಿಗೆ ವಿಶೇಷ ವ್ಯವಸ್ಥೆ ಮಾಡಲಾಗಿದ್ದು, ಅಲ್ಲಿಂದ ರಾಜ್ಯಕ್ಕೆ ಮರಳಲು ಈಗಾಗಲೇ ಕಾಯ್ದಿರಿಸಿರುವ ರೈಲ್ವೆ ಟಿಕೆಟ್ಗಳನ್ನು ಅವರ ಅಗತ್ಯಕ್ಕೆ ಅನುಗುಣವಾಗಿ ಪರಿವರ್ತಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎನ್ನಲಾಗಿದೆ.
ಸಹಾಯಕ್ಕಾಗಿ ಸರ್ಕಾರದ ದೂರವಾಣಿ ಸಂಖ್ಯೆ:
ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ-1070(ಟೋಲ್ ಫ್ರೀ)
ದೆಹಲಿ ಕರ್ನಾಟಕ ಭವನದ ಜಂಟಿ ನಿವಾಸಿ ಆಯುಕ್ತ ರಂಗಸ್ವಾಮಿ: 09868393991