ಐಪಿಎಲ್ ಪ್ರಕರಣದ ಆರೋಪಿ ಲಲಿತ್ ಮೋದಿಗೆ ನೆರವು ವಿಚಾರಕ್ಕೆ ಸಂಬಂಧಿಸಿದಂತೆ ಆರ್ಎಸ್ಎಸ್ ಮುಖಂಡರು ಸುಷ್ಮಾ ಸ್ವರಾಜ್, ವಸುಂಧರಾ ರಾಜೇ ವಿರುದ್ಧ ತಿರುಗಿ ಬಿದ್ದಿದ್ದು ತಕ್ಷಣ ರಾಜೀನಾಮೆ ಪಡೆಯುವಂತೆ ಆಗ್ರಹಿಸಿದ್ದಾರೆ.
ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಪರ ನಿಂತಿದ್ದ ಆರ್ಎಸ್ಎಸ್ ಮುಖಂಡರು ಇದೀಗ ಯೂಟರ್ನ್ ಹೊಡೆದಿದ್ದು ಸುಷ್ಮಾ ಸ್ವರಾಜ್ ಹಾಗೂ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆಗೆ ನೀಡುವಂತೆ ಆರ್ಎಸ್ಎಸ್ ಮುಖಂಡ ಗೋವಿಂದಾಚಾರ್ಯ ಪಟ್ಟು ಹಿಡಿದಿದ್ದಾರೆ.
ಬಿಜೆಪಿ ತನ್ನ ಘನತೆ ಕಾಪಾಡಿಕೊಳ್ಳಬೇಕು ಎಂದಾದರೆ ಸುಷ್ಮಾ ಹಾಗೂ ರಾಜೇ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲೇಬೇಕು. ಇಲ್ಲದಿದ್ದಲ್ಲಿ ಪಕ್ಷದ ಕುರಿತು ತಪ್ಪು ಸಂದೇಶ ರವಾನೆಯಾಗುವ ಸಾಧ್ಯತೆ ಇದ್ದು ಈ ಹಿನ್ನೆಲೆಯಲ್ಲಿ ಶೀಘ್ರವೇ ಅವರಿಬ್ಬರ ರಾಜೀನಾಮೆಯನ್ನು ಪಡೆಯುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೋವಿಂದಾಚಾರ್ಯ ತಮ್ಮ ಸಂದೇಶ ನೀಡಿದ್ದಾರೆ.