ರಾಷ್ಟ್ರೀಯ

ವಾಮಾಚಾರಕ್ಕೆ ನಾಲ್ವರು ಮಕ್ಕಳು ಸೇರಿ ಒಂದೇ ಕುಟುಂಬದ 6 ಮಂದಿ ಬಲಿ ! ಓರ್ವನ ಬಂಧನ

Pinterest LinkedIn Tumblr

tantrik

ಭುವನೇಶ್ವರ:ಭೀಕರ ವಾಮಾಚಾರ ಶಂಕೆ ಘಟನೆಯೊಂದರಲ್ಲಿ, ಒಂದೇ ಕುಟುಂಬದ ನಾಲ್ವರು ಮಕ್ಕಳು ಸೇರಿ ಆರು ಮಂದಿ ಸದಸ್ಯರು ಸಾವನ್ನಪ್ಪಿರುವ ಘಟನೆ ಒರಿಸ್ಸಾ ರಾಜ್ಯದ ಕಿಯೋಂಜರ್ ಜಿಲ್ಲೆಯ ಕುಗ್ರಾಮವೊಂದರಲ್ಲಿ ನಡೆದಿದೆ.

ದಂಪತಿ ಮತ್ತು ಮಕ್ಕಳು ರಕ್ತದ ಮಡುವಿನಲ್ಲಿ ಬಿದ್ದಿದ್ದರು ಎಂದು ಘಟನೆ ನಡೆದ ಸ್ಥಳಕ್ಕೆ ಧಾವಿಸಿದ್ದ ಪೊಲೀಸರು ತಿಳಿಸಿದ್ದಾರೆ. ಅಪರಿಚಿತ ದುಷ್ಕರ್ಮಿಗಳು ವಾಮಾಚಾರ ನಡೆಸಿರಬಹುದೆಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಇದರಲ್ಲಿ ಸ್ಥಳೀಯ ಅರ್ಚಕನೊಬ್ಬನ ಪಾತ್ರ ಇರಬಹುದು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಪೊಲೀಸರಿಗೆ ತಿಳಿಸಿದ್ದಾರೆ.

ಈ ಸಂಬಂಧ ಪೊಲೀಸರು ಓರ್ವ ಶಂಕಿತನನ್ನು ಬಂಧಿಸಿದ್ದು, ಇನ್ನುಳಿದವರು ತಲೆಮರೆಸಿಕೊಂಡಿದ್ದಾರೆ. ಅವರಿಗಾಗಿ ಹುಡುಕಾಟ ನಡೆಯುತ್ತಿದೆ. ಭಾರತೀಯ ದಂಡಸಂಹಿತೆಯ ಸೆಕ್ಷನ್ 302 ಮತ್ತು 34ರಡಿ ಕೇಸು ದಾಖಲಾಗಿದೆ.

ಕಿಯೋಂಜರ್ ನಿಂದ 70 ಕಿ.ಮೀ ದೂರದಲ್ಲಿ ಜೋಡಾ ಪೊಲೀಸ್ ಸ್ಟೇಷನ್ ನ ಸರಹದ್ದಿನ ಮುಂಡಾ ಸಹಿ ಎಂಬಲ್ಲಿ ಈ ಘಟನೆ ನಡೆದಿದೆ. ಕುಟುಂಬಸ್ಥರ ಮೇಲೆ ದುಷ್ಕರ್ಮಿಗಳು ವಾಮಾಚಾರ ನಡೆಸಿದ್ದರಿಂದ ಸಾವನ್ನಪ್ಪಿರಬಹುದು ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

Write A Comment