ರಾಷ್ಟ್ರೀಯ

ಗಡಿಯಲ್ಲಿ ನಿಲ್ಲದ ಪಾಕಿಗಳ ಕಿತಾಪತಿ : ಭಾರೀ ಗುಂಡಿನ ಚಕಮಕಿ

Pinterest LinkedIn Tumblr

fire-87687765775878ಶ್ರೀನಗರ, ಜು.18-ನಿನ್ನೆ ಭಾರತ ಕೊಟ್ಟಿರುವ ಖಡಕ್ ಎಚ್ಚರಿಕೆಗೆ ಕ್ಯಾರೇ ಎನ್ನದ ಪಾಕಿಸ್ತಾನದ ಸೈನಿಕರು ಇಂದು ಮತ್ತೊಮ್ಮೆ ಕದನ ವಿರಾಮ ಉಲ್ಲಂಘಿಸಿ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಭಾರತೀಯ ಸೇನಾ ನೆಲೆಗಳ ಮೇಲೆ ದಾಳಿ ನಡೆಸಿದ್ದಾರೆ.

ಜಮ್ಮುಕಾಶ್ಮೀರದ ರಜಾರಿ ಜಿಲ್ಲೆಯ ನೌಶೇರಾ ಸೆಕ್ಟರ್‌ನಲ್ಲಿ ಪಾಕ್ ಸೈನಿಕರು ಗಡಿಯುದ್ದಕ್ಕೂ ಗುಂಡಿನ ದಾಳಿ ನಡೆಸಿದ್ದಾರೆ. ಎರಡು ಭಾರತೀಯ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ಅವರು ನಡೆಸಿರುವ ದಾಳಿಯಲ್ಲಿ ಈವರೆಗೂ ಯಾವುದೇ ಸಾವುನೋವು ಸಂಭವಿಸಿದ ಬಗ್ಗೆ ವರದಿ ಬಂದಿಲ್ಲ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.

ಪಾಕಿಸ್ತಾನ ಸೈನಿಕರ ಈ ಅಪ್ರಚೋದಿತ ಗುಂಡಿನ ದಾಳಿಗೆ ಪ್ರತಿಯಾಗಿ ಭಾರತೀಯ ಗಡಿಭದ್ರತಾ ಪಡೆಯ ಯೋಧರೂ ದಿಟ್ಟ ಪ್ರತ್ಯುತ್ತರ ನೀಡಿದ್ದಾರೆ. ಕಳೆದ 48 ತಾಸುಗಳಲ್ಲಿ ಪಾಕ್ ಸೇನೆ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿಗೆ ಪ್ರತಿಯಾಗಿ ಭಾರತೀಯ ಗಡಿಭದ್ರತಾ ಪಡೆಯ ಯೋಧರೂ ದಿಟ್ಟ ಪ್ರತ್ಯುತ್ತರ ನೀಡಿದ್ದಾರೆ. ಳೆದ 48 ತಾಸುಗಳಲ್ಲಿ ಪಾಕ್ ಸೇನೆ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿರುವುದು 5ನೇ ಬಾರಿಯಾಗಿದೆ. ಈ ಮೊದಲು ನಡೆದ ಗುಂಡಿನ ದಾಳಿಗೆ ಒಬ್ಬ ಮಹಿಳೆ ಸಾವನ್ನಪ್ಪಿ , ಒಬ್ಬ ಯೋಧ ಸೇರಿದಂತೆ ನಾಲ್ವರು ಗಾಯಗೊಂಡಿದ್ದರು. ಈ ಮಧ್ಯೆ, ಇದೇ ರೀತಿ ಗುಂಡಿನ ದಾಳಿಗಳು ಮುಂದುವರೆದರೆ ಭಾರತವೂ ಕೂಡ ಗುಂಡಿನ ಉತ್ತರವನ್ನೇ ಕೊಡಬೇಕಾಗುತ್ತದೆ ಎಂದು ವಿದೇಶಾಂಗ ಖಾತೆ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿತ್ತು.

Write A Comment