ಚೆನ್ನೈ, ಜು.೨೮-ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಸಂಪುಟದಲ್ಲಿ ತೆರಿಗೆ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ವಿ.ಸೆಂಥಿಲ್ ಬಾಲಾಜಿ ಅವರನ್ನು ಸಂಪುಟದಿಂದ ಕೈಬಿಡಲಾಗಿದೆ. ಮುಖ್ಯಮಂತ್ರಿಗಳ ಶಿಫಾರಸಿನ ಮೇರೆಗೆ ರಾಜ್ಯಪಾಲ ಕೆ.ರೋಸಯ್ಯ ಅವರು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.
ಪಕ್ಷದಲ್ಲಿರುವ ಉನ್ನತ ಹುದ್ದೆಯಿಂದಲೂ ಸೆಂಥಿಲ್ ಅವರಿಗೆ ಕೊಕ್ ನೀಡಲಾಗಿದೆ. ಕೈಗಾರಿಕಾ ಸಚಿವೆ ಪಿ.ತಂಗಮಣಿ ಅವರು ಹೆಚ್ಚುವರಿಯಾಗಿ ಸಾರಿಗೆ ಖಾತೆಯನ್ನು ನಿರ್ವಹಿಸುವಂತೆ ಸೂಚಿಸಲಾಗಿದೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ನಿರ್ದೋಷಿಯಾಗಿ ಮತ್ತೆ ಸಿಎಂ ಪಟ್ಟ ಅಲಂಕರಿಸಿರುವ ಜಯಲಲಿತಾ ಅವರ ಈ ದಿಢೀರ್ ನಿರ್ಧಾರ ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಈರೂರು ಜಿಲ್ಲಾ ಎಐಎಡಿಎಂಕೆ ಕಾರ್ಯದರ್ಶಿ ಹುದ್ದೆಯಿಂದಲೂ ವಿ.ಸೆಂಥಿಲ್ ಅವರನ್ನು ಕೆಳಗಿಳಿಸಲಾಗಿದ್ದು, ಕಾರಣ ಏನೆಂಬುದು ಇನ್ನೂ ಗೊತ್ತಾಗಿಲ್ಲ.