ನವದೆಹಲಿ; ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರನ್ನು ಅಪ್ಪಿಕೊಂಡಿದ್ದಕ್ಕೆ ಹಿರಿಯ ಗಾಂಧಿವಾದಿ ಹಾಗೂ ಭ್ರಷ್ಟಾಚಾರ ವಿರೋಧಿ ಹೋರಾಟಗಾರದ ನಾಯಕ ಅಣ್ಣಾ ಹಜಾರೆ ಕಿಡಿ ಕಾರಿದ್ದಾರೆ.
ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅರವಿಂದ್ ಕೇಜ್ರಿವಾಲ್ ಕಳಂಕಿತ ಲಾಲೂ ಪ್ರಸಾದ್ ಯಾದವ್ ಅವರನ್ನು ಅಪ್ಪಿಕೊಂಡಿದ್ದಕ್ಕೆ ಅಣ್ಣಾ ಹಜಾರೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಥ್ಯಾಂಕ್ ಗಾಡ್ ನಾನು ಅರವಿಂದ್ ಕೇಜ್ರಿವಾಲ್ ಅವರ ಜೊತೆಗಿಲ್ಲ ಎಂದು ಹಜಾರೆ ಹೇಳಿದ್ದಾರೆ.
ಕೇಜ್ರಿವಾಲ್ ಮತ್ತು ಲಾಲೂ ಪ್ರಸಾದ್ ಅಪ್ಪುಗೆ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇದಕ್ಕೆ ಬಿಜೆಪಿ ಸೇರಿದಂತೆ ಹಲವರು ಟೀಕೆ ಮಾಡಿದ್ದರು.