ನವದೆಹಲಿ: ದೇಶದಾದ್ಯಂತ ತೀವ್ರ ಚರ್ಚೆ ಹಾಗೂ ವಿರೋಧಕ್ಕೆ ಕಾರಣವಾಗಿರುವ ನಟ ಅಮಿರ್ ಖಾನ್ ಅವರ ಅಸಹಿಷ್ಣುತೆ ಹೇಳಿಕೆಯನ್ನು ಬೆಂಬಲಿಸಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಪ್ರತಿಯೊಬ್ಬರಿಗೂ ಅವರವರ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕಿದೆ ಎಂದು ಬುಧವಾರ ಹೇಳಿದ್ದಾರೆ.
ನಟ ಅಮಿರ್ ಖಾನ್ ಅವರ ಅಸಹಿಷ್ಣುತೆ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಯಾವುದೋ ವಿಷಯದಲ್ಲಿ ನೋವಿನಲ್ಲಿದ್ದರೇನೋ ಹೀಗಾಗಿ ಈ ರೀತಿಯ ಹೇಳಿಕೆ ನೀಡಿದ್ದಾರೆ. ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕು ಪ್ರತಿಯೊಬ್ಬರಿಗೂ ಇದೆ. ಅಮಿರ್ ಖಾನ್ ಒಬ್ಬ ದೊಡ್ಡ. ಹೇಳಿಕೆ ಕುರಿತಂತೆ ಸರ್ಕಾರ ಅವರೊಂದಿಗೆ ಮಾತನಾಡುವ ಅಗತ್ಯವಿದ್ದು, ಅವರ ಭಾವನೆಗಳನ್ನು ಅರ್ಥಮಾಡಿಕೊಳ್ಳುವ ಅಗತ್ಯವಿದೆ ಎಂದು ಹೇಳಿದ್ದಾರೆ.
ಮುಲಾಯಂ ಸಿಂಗ್ ಅವರ ಈ ಹೇಳಿಕೆ ಇದೀಗ ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದ್ದು, ನಾಳೆ ನಡೆಯುವ ಚಳಿಗಾಲ ಅಧಿವೇಶನದಲ್ಲಿ ಅಸಹಿಷ್ಣುತೆ ಕುರಿತಂತೆ ಸಂಸತ್ತಿನಲ್ಲಿ ಗದ್ದಲವೇರ್ಪಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಅಸಹಿಷ್ಣುತೆ ಚರ್ಚೆ ಕುರಿತಂತೆ ಈಗಾಗಲೇ ಪ್ರತಿಕ್ರಿಯೆ ನೀಡಿರುವ ಕೇಂದ್ರವು ಈ ಕುರಿತಂತೆ ಚರ್ಚೆ ನಡೆಸಲು ತಯಾರಿದ್ದೇವೆಂದು ಹೇಳಿದೆ.