ನವದೆಹಲಿ, ಡಿ.1: ಕೇಂದ್ರ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರ ಪುತ್ರ ಕಾರ್ತಿಕ್ ಚಿದಂಬರಂ ಕಂಪೆನಿ ಹಾಗೂ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಹಾಗೂ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಕೇಂದ್ರದ ಮಾಜಿ ಸಚಿವ ಚಿದಂಬರಂ ಪುತ್ರ ಕಾರ್ತಿಕ್ ಚಿದಂಬರಂ ಅವರ ಒಡೆತನದ ಕಂಪೆನಿಗಳು, ಅವರ ನಿವಾಸದ ಮೇಲೆ ಇಂದು ಬೆಳಗ್ಗೆ ಇಡಿ ಮತ್ತು ಐಟಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ಕೆಲವು ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
ಕೆಲವು ಸಿಡಿಗಳು, ಕಂಪೆನಿ ವ್ಯವಹಾರಗಳಿಗೆ ಸಂಬಂಧಿಸಿದ ಹಾರ್ಡ್ ಡಿಸ್ಕ್ಗಳನ್ನು ವಶಪಡಿಸಿಕೊಂಡಿರುವುದಾಗಿ ಮೂಲಗಳು ತಿಳಿಸಿವೆ. ಇನ್ನೂ ಕೂಡ ಕಂಪೆನಿಗಳು, ನಿವಾಸದ ಮೇಲಿನ ದಾಳಿ ಪರಿಶೀಲನೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.