ನವದೆಹಲಿ: ವಿಕೃತವಾಗಿ ಕೊಲೆ ಮಾಡುವ ಮೂಲಕ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಕುಖ್ಯಾತ ದಂಡುಪಾಳ್ಯದ ಹಂತಕರಿಗೆ ಸುಪ್ರೀಂಕೋರ್ಟ್ ರಿಲೀಫ್ ನೀಡಿದೆ.
2014ರಲ್ಲಿ ಹೈಕೋರ್ಟ್ ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ ದಂಡುಪಾಳ್ಯದ ಹಂತರ ವಿರುದ್ಧದ ಪ್ರಕರಣವನ್ನು ಖುಲಾಸೆ ಮಾಡಿತ್ತು. ಈ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಈ ಸಂಬಂಧ ಸುಪ್ರೀಂಕೋರ್ಟ್ ಮತ್ತೆ ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ ಅರ್ಜಿ ವಜಾ ಮಾಡಿ ದಂಡುಪಾಳ್ಯ ತಂಡದ 6 ಆರೋಪಿಗಳಿಗೆ ರಿಲೀಫ್ ನೀಡಿದೆ.
ತುಮಕೂರು ಮತ್ತು ಹಾಸನ ಜಿಲ್ಲೆಯಲ್ಲಿ ತಲ್ಲಣ ಮೂಡಿಸಿದ್ದ ವಿವಿಧ ಹತ್ಯಾ ಪ್ರಕರಣಗಳ ಕುಖ್ಯಾತ ದಂಡು ಪಾಳ್ಯ ಗ್ಯಾಂಗ್ ಗೆ 2010ರಲ್ಲಿ ಸೆಷನ್ಸ್ ಕೋರ್ಟ್ ಗಲ್ಲುಶಿಕ್ಷೆ ವಿಧಿಸಿತ್ತು. ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ 2014ರಲ್ಲಿ ಹೈಕೋರ್ಟ್ ದಂಡುಪಾಳ್ಯದ ಹಂತರ ವಿರುದ್ಧದ ಪ್ರಕರಣವನ್ನು ಖುಲಾಸೆ ಮಾಡಿತ್ತು.
ಆರೋಪಿಗಳಾದ ದಂಡುಪಾಳ್ಯದ ವೆಂಕಟರಾಮ, ದೊಡ್ಡಹನುಮ, ಹೊಟ್ಟೆ ಕೃಷ್ಣ, ಚಿಕ್ಕ ಮುನಿಯಪ್ಪ, ಕೃಷ್ಣ, ತಿಮ್ಮ ಪ್ರಕರಣದಿಂದ ಖುಲಾಸೆಗೊಂಡಿದ್ದಾರೆ.