ನವದೆಹಲಿ: ಸಿಖ್ ವಿರೋಧಿ ಗಲಭೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ವಿರುದ್ಧ ಹೆಚ್ಚಿನ ತನಿಖೆ ನಡೆಸುವಂತೆ ದೆಹಲಿ ಕೋರ್ಟ್ ಸಿಬಿಐಗೆ ಆದೇಶಿಸಿದೆ.
ಜಗದೀಶ್ ಟೈಟ್ಲರ್ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಪುನರ್ ವಿಚಾರಣೆ ನಡೆಸಬೇಕೆಂದು ದೆಹಲಿ ಕೋರ್ಟ್ ಆದೇಶಿಸಿದ್ದು, ಜಗದೀಶ್ ವಿರುದ್ಧ ಹೆಚ್ಚಿನ ತನಿಖೆಗೆ ಆದೇಶಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಟೈಟ್ಲರ್ ಗೆ ಕ್ಲೀನ್ ಚೀಟ್ ನೀಡಿ ಸಲ್ಲಿಸಿರುವ ಅಂತಿಮ ವರದಿಯನ್ನು ಸ್ವೀಕರಿಸಲು ನಿರಾಕರಿಸಿರುವ ಹೆಚ್ಚುವರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸೌರಭ್ ಪ್ರತಾಪ್ ಸಿಂಗ್ ಲಾಲೆರ ಹೆಚ್ಚಿನ ತನಿಖೆ ನಡೆಸುವಂತೆ ಸಿಬಿಐಗೆ ಆದೇಶಿಸಿದ್ದಾರೆ.
ಜಗದೀಶ್ ಅವರ ವಿರುದ್ಧ ಸಾಕಷ್ಟು ಸಾಕ್ಷ್ಯಗಳಿದ್ದರೂ ಸಿಬಿಐ ಕಾಂಗ್ರೆಸ್ ಮುಖಂಡನ ಪರವಾಗಿ ನಿಂತಿದೆ ಎಂದು ವಾದಿಸುವ ಮೂಲಕ ಸಿಬಿಐ ಕ್ಲೀನ್ ಚಿಟ್ ನೀಡಿರುವುದನ್ನು ಸಂತ್ರಸ್ತರು ತೀವ್ರವಾಗಿ ವಿರೋಧಿಸಿದ್ದರು.