ರಾಷ್ಟ್ರೀಯ

ಪ್ರಣಬ್, ಮೋದಿ, ಸಿಂಗ್ ಸಹಿತ ಹಲವು ಗಣ್ಯರಿಂದ ಸಂವಿಧಾನ ಶಿಲ್ಪಿ ಅಂಬೇಡ್ಕರ್‌ಗೆ ನಮನ

Pinterest LinkedIn Tumblr

2

ನವದೆಹಲಿ, ಡಿ.6: ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಅಂಗವಾಗಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಅವರ ಪುತ್ಥಳಿಗೆ ಪುಷ್ಪಗುಚ್ಛ ಅರ್ಪಿಸಿ ಭಾವಪೂರ್ಣ ನಮನ ಸಲ್ಲಿಸಿದರು. ಸಂಸತ್ತಿನ ಮುಂಭಾಗದಲ್ಲಿರುವ ಅಂಬೇಡ್ಕರ್ ಅವರ ಪ್ರತಿಮೆ ಬಳಿ ಪ್ರಧಾನಿ, ರಾಷ್ಟ್ರಪತಿಯವರೊಂದಿಗೆ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ, ಮಾಜಿ ಪ್ರಧಾನಿ ಡಾ.ಮನಮೋಹನ್‌ಸಿಂಗ್, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತಿತರರು ಈ ಕಾರ್ಯಕ್ರಮದಲ್ಲಿ ಭಾಗಿಗಳಾಗಿದ್ದರು.

ಈ ಸಂದರ್ಭ ಅಂಬೇಡ್ಕರ್ ಅವರ ಸೇವೆಯನ್ನು ಸ್ಮರಿಸಿದ ಮೋದಿ, ಸರ್ವಸಮನ್ವತೆಯ ಹರಿಕಾರರಾದ ಅಂಬೇಡ್ಕರ್ ಐಕ್ಯತೆ, ಸಮಾನತೆ, ಸಹೋದರತೆಯ ತತ್ವಗಳ ಆಧಾರದ ಮೇಲೆ ಅವರು ಅತ್ಯುನ್ನತ ಸಂವಿಧಾನ ರಚಿಸಿ ನಮಗೆ ಕೊಟ್ಟಿದ್ದಾರೆ ಎಂದು ಹೇಳಿದರು. ಈ ಸಮಾಜದ ಬಡವರು, ತುಳಿತಕ್ಕೊಳಗಾದವರ ಉದ್ಧಾರಕ್ಕಾಗಿ ಅವರು ಶ್ರಮಿಸಿ ದೇಶಕ್ಕೇ ಮಾರ್ಗದರ್ಶಕರಾಗಿದ್ದಾರೆ ಎಂದು ಸ್ಮರಿಸಿದರು.

Write A Comment