ಶ್ರೀನಗರ: ಕಣಿವೆನಾಡಿನಲ್ಲಿ ಉಗ್ರರ ಉಪಟಳ ಮುಂದುವರೆದಿದ್ದು ಅನಂತ್ನಾಗ್ ಜಿಲ್ಲೆಯ ಶ್ರೀನಗರ–ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ ಸಿಆರ್ಪಿಎಫ್ ಯೋಧರಿದ್ದ ಬಸ್ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಗೆ ಸೇರಿದ 6 ಮಂದಿ ಯೋಧರು ತೀವ್ರವಾಗಿ ಗಾಯಗೊಂಡಿದ್ದು ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು . ಕೆಲವರ ಸ್ಥಿತಿ ಚಿಂತಾಜನಕವಾಗಿದ್ದರಿಂದ ಅವರನ್ನು ಶ್ರೀನಗರದ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಶ್ರೀನಗರ್ -ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಸ್ಥಾನ್ ಸಮೀಪದ ಗ್ರೀನ್ ಟನಲ್ ಬಳಿ ಸಾಗುತ್ತಿದ್ದ ಸಿಆರ್ಪಿಎಫ್ ಬಸ್ ಮೇಲೆ ಎಕೆ47 ರೈಫಲ್ಸ್ನಿಂದ ಉಗ್ರರು ಏಕಾಏಕಿ ದಾಳಿ ನಡೆಸಿದರು. ಶ್ರೀನಗರದಿಂದ 50 ಕೀಲೋಮೀಟರ್ ದೂರದಲ್ಲಿ ಈ ದಾಳಿ ನಡೆದಿದೆ.
ಸ್ಥಳದಲ್ಲಿ ಬಿಗಿ ಭದ್ರತೆಯನ್ನು ಕಲ್ಪಿಸಲಾಗಿದ್ದು, ಅಡಗಿರುವ ದಾಳಿಕೋರರ ಪತ್ತೆಗೆ ಬಲೆ ಬೀಸಲಾಗಿದೆ.
ಕಳೆದ ತಿಂಗಳು ಪಂಪೊರ್ನ ದ್ರಂಗ್ಬಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಗ್ರರು ಸಿಆರ್ಪಿಎಫ್ ತುಕಡಿ ಮೇಲೆ ದಾಳಿ ನಡೆಸಿದ್ದ ಉಗ್ರರು ಇಬ್ಬರು ಯೋಧರು ಮತ್ತು ಇಬ್ಬರು ನಾಗರಿಕರನ್ನು ಗಾಯಗೊಳಿಸಿದ್ದರು.