ನವದೆಹಲಿ: ತಾಂಜೇನಿಯಾ ಯುವತಿ ಮೇಲಿನ ಹಲ್ಲೆ ಪ್ರಕರಣವನ್ನು ತೀವ್ರವಾಗಿ ಖಂಡಿಸುವುದಾಗಿ ಶುಕ್ರವಾರ ಹೇಳಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಘಟನೆಗೆ ಸಂಬಂಧಿಸಿದಂತೆ ಬಿಗಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಪ್ರಧಾನ ಮಂತ್ರಿಯವರು ಯಾವುದೇ ಭರವಸೆಯನ್ನೂ ಕೃತಿಗಿಳಿಸಲು ಸಾಧ್ಯವಾಗದೇ ಇದ್ದುದಕ್ಕಾಗಿ ಕಳೆದ ಒಂದೂವರೆ ವರ್ಷದಿಂದ ನೆಪಗಳನ್ನು ಹೇಳುತ್ತಲೇ ಇದ್ದಾರೆ ಎಂದೂ ರಾಹುಲ್ ಟೀಕಿಸಿದ್ದಾರೆ.
ಎನ್ಡಿಎ ಸರ್ಕಾರ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ದೊಡ್ಡ ದೊಡ್ಡ ಕೈಗಾರಿಕೋದ್ಯಮಿಗಳು ಕೂಡಾ ನಮ್ಮ ಬಳಿ ದೂರುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.